ಭಾರತೀಯ ದಸಂಸ ಜಿಲ್ಲಾಧ್ಯಕ್ಷರಾಗಿ ಕೆ.ಡಿ.ಅಂಜಿನಪ್ಪ

ಹರಪನಹಳ್ಳಿ, ಜು.29- ಡಾ. ಹೆಚ್. ಪ್ರಕಾಶ್ ಬಿರಾದಾರ್‌ ಸ್ಥಾಪಿತ ಭಾರತೀಯ ದಲಿತ ಸಂಘರ್ಷ ಸಮಿತಿಯ ವಿಜಯನಗರ ಜಿಲ್ಲಾಧ್ಯಕ್ಷರಾಗಿ ತಾಲ್ಲೂಕಿನ ಅರಸೀಕೆರೆ ಗ್ರಾಮದ ಕೆ.ಡಿ. ಅಂಜಿನಪ್ಪ ಆಯ್ಕೆಯಾ ಗಿದ್ದಾರೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ರುವ ಕೇಂದ್ರ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಡಾ.ಪ್ರಕಾಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ತಿಮ್ಮರಾಜ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಹನುಮಂತಪ್ಪ ಅವರು ನೇಮಕಾತಿ ಆದೇಶ ಪತ್ರ ವಿತರಿಸಿದ್ದಾರೆ. 

error: Content is protected !!