ಜಿಲ್ಲಾ ಕುರುಬರ ಸಂಘದ ಹಂಗಾಮಿ ಅಧ್ಯಕ್ಷರಾಗಿ ಕೊಕ್ಕನೂರು ದ್ಯಾಮಣ್ಣ

ಜಿಲ್ಲಾ ಕುರುಬರ ಸಂಘದ ಹಂಗಾಮಿ ಅಧ್ಯಕ್ಷರಾಗಿ ಕೊಕ್ಕನೂರು ದ್ಯಾಮಣ್ಣ - Janathavaniದಾವಣಗೆರೆ, ಆ.3- ದಾವಣಗೆರೆ ಜಿಲ್ಲಾ ಕುರುಬರ ಸಂಘದ ಹಂಗಾಮಿ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರೂ ಆಗಿರುವ ಕುರುಬ ಸಮಾಜದ ಹಿರಿಯ ಮುಖಂಡ ಕೊಕ್ಕನೂರು ದ್ಯಾಮಣ್ಣ ಆಯ್ಕೆಯಾಗಿದ್ದಾರೆ.

ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಕೆಂಗೋ ಹನುಮಂತಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಸಮಾಜದ ಕಚೇರಿಯಲ್ಲಿ ನಿನ್ನೆ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಯಿತು ಎಂದು ಪ್ರಧಾನ ಕಾರ್ಯದರ್ಶಿಯೂ ಆಗಿರುವ ಹಿರಿಯ ವಕೀಲ ಲೋಕಿಕೆರೆ ಸಿದ್ದಪ್ಪ ತಿಳಿಸಿದ್ದಾರೆ.

error: Content is protected !!