ದಾವಣಗೆರೆ, ನ. 21- ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಬೆಂಗಳೂರು) ಯ ನಾಮ ನಿರ್ದೇಶಿತ ನಿರ್ದೇಶಕರಾಗಿ ನಗರದ ಹಿರಿಯ ತೆರಿಗೆ ಸಲಹೆಗಾರರಾದ ಜಂಬಗಿ ರಾಧೇಶ್ ನೇಮಕಗೊಂಡಿ ದ್ದಾರೆ. ದಾವಣಗೆರೆ ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರೂ, ದಾವಣಗೆರೆ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ನಿರ್ದೇಶಕರೂ ಆಗಿರುವ ರಾಧೇಶ್ ಅವರ ನೇಮಕ ಕುರಿತಂತೆ ಎಫ್.ಕೆ.ಸಿ.ಸಿ.ಐ. ಅಧ್ಯಕ್ಷ ಡಾ. ಐ.ಎಸ್. ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.
April 12, 2025