ದಿಶಾ ಸಭೆಗೆ ನಾಮ ನಿರ್ದೇಶನ ಸದಸ್ಯರ ನೇಮಕ

ದಿಶಾ ಸಭೆಗೆ ನಾಮ ನಿರ್ದೇಶನ ಸದಸ್ಯರ ನೇಮಕ - Janathavaniದಾವಣಗೆರೆ, ಜು.12- ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಗೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಜಿಲ್ಲೆಯ ನಾಲ್ವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.

ಹಿರಿಯ ನಾಗರಿಕರ ಕೋಟಾದಡಿ ಜಿ.ಚಂದ್ರೇಗೌಡ, ಮಹಿಳಾ ಕೋಟಾದಡಿ ಹೆಚ್.ಎಂ. ಆಶಾ, ಶೈಕ್ಷಣಿಕ ವಲಯದಿಂದ ಹೆಚ್.ಕೆ.ಬಸವರಾಜ್, ನಾಗರಿಕ ಹಿತರಕ್ಷಣಾ ಸಮಿತಿ ಕೋಟಾದಡಿ ಜಿ.ಪಿ.ಮುಪ್ಪಣ್ಣ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿರುವ ದಿಶಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಚಂದ್ರೇಗೌಡ ಮತ್ತಿತರರು, ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ, ನ್ಯೂನತೆಗಳೇನಾದರೂ ಇದ್ದಲ್ಲಿ ಸಮಿತಿ ಸಭೆಯಲ್ಲಿ ಚರ್ಚಿಸುವ ಅಧಿಕಾರ ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

error: Content is protected !!