ದಾವಣಗೆರೆ ಅರ್ಬನ್ ಬ್ಯಾಂಕ್ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಣವಿ

ದಾವಣಗೆರೆ ಅರ್ಬನ್ ಬ್ಯಾಂಕ್ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಣವಿ - Janathavaniದಾವಣಗೆರೆ,ಅ.30- ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಗೆ ವೃತ್ತಿಪರ ನಿರ್ದೇಶಕರಾಗಿ ಹಿರಿಯ ನ್ಯಾಯವಾದಿ ಮಲ್ಲಿಕಾರ್ಜುನ ಕಣವಿ ನೇಮಕಗೊಂಡಿದ್ದಾರೆ.

ಬ್ಯಾಂಕಿನ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ ಅವರ ಅಧ್ಯಕ್ಷತೆಯಲ್ಲಿ ಮೊನ್ನೆ ನಡೆದ ಬ್ಯಾಂಕಿನ ಆಡಳಿತ ಮಂಡಲಿಯ ಸಭೆಯಲ್ಲಿ ಈ ನೇಮಕ ನಡೆಯಿತು. ವೃತ್ತಿಪರ ನಿರ್ದೇಶಕರಾಗಿದ್ದ ಲೆಕ್ಕ ಪರಿಶೋಧಕ ವಿ. ಲಿಂಗರಾಜ್ ಅವರ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಬ್ಯಾಂಕಿನ ಆಡಳಿತ ಮಂಡಳಿಯು ಮಲ್ಲಿಕಾರ್ಜುನ ಕಣವಿ ಅವರನ್ನು ಕೋ-ಆಪ್ ಮಾಡಿಕೊಂಡಿತು. 

ಬ್ಯಾಂಕಿನ ಉಪಾಧ್ಯಕ್ಷ ಅಂದನೂರು ಮುಪ್ಪಣ್ಣ, ನಿರ್ದೇಶಕರುಗಳಾದ ಬಿ.ಸಿ. ಉಮಾಪತಿ, ಮತ್ತಿಹಳ್ಳಿ ವೀರಣ್ಣ, ಪಲ್ಲಾಗಟ್ಟೆ ಶಿವಾನಂದಪ್ಪ, ಟಿ.ಎಸ್. ಜಯರುದ್ರೇಶ್, ದೇವರಮನೆ ಶಿವಕುಮಾರ್, ಅಜ್ಜಂಪುರ ಶೆಟ್ರು ವಿಜಯಕುಮಾರ್, ಎಂ. ಚಂದ್ರಶೇಖರ್, ಶ್ರೀಮತಿ ಸುರೇಖಾ ಎಂ. ಚಿಗಟೇರಿ, ಕಂಚಿಕೆರೆ ಮಹೇಶ್, ಮುಂಡಾಸ್‌ ವೀರೇಂದ್ರ, ನಲ್ಲೂರು ಎಸ್. ರಾಘವೇಂದ್ರ, ಇ.ಎಂ. ಮಂಜುನಾಥ, ಎಂ. ದೊಡ್ಡಪ್ಪ,  ವಿ. ವಿಕ್ರಂ, ಬೆಳ್ಳೂಡಿ ಮಂಜುನಾಥ್ ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!