ನಾಯಕ ವಿದ್ಯಾರ್ಥಿ ನಿಲಯದಲ್ಲಿ ಗಣರಾಜ್ಯೋತ್ಸವ

ದಾವಣಗೆರೆ, ಜ.26 –  ನಗರದ ನಾಯಕ ವಿದ್ಯಾರ್ಥಿ ನಿಲಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ನಿವೃತ್ತ ಪೊಲೀಸ್ ಅಧಿಕಾರಿ ಪಿ.ಆರ್. ಶಾಹು ಧ್ವಜಾರೋಹಣ ನೆರವೇರಿಸಿದರು. ಪ್ರಾಧ್ಯಾಪಕ ಪ್ರೊ. ಎ.ಬಿ. ರಾಮಚಂದ್ರಪ್ಪ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ನಾಯಕ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ.ವೀರಣ್ಣ, ಮುಖಂಡರುಗಳಾದ ಆಂಜನೇಯ ಗುರೂಜಿ, ವಿನಾಯಕ ಪೈಲ್ವಾನ್, ಶ್ರೀನಿವಾಸ ದಾಸಕರಿಯಪ್ಪ, ನಾಗರಾಜ್, ಶ್ಯಾಗಲೆ ಮಂಜಣ್ಣ ಮುಂತಾದವರು ಉಪಸ್ಥಿತರಿದ್ದರು.

error: Content is protected !!