ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸಂಕಲ್ಪ ಸಭೆ

ದಾವಣಗೆರೆ, ಜ.9- ನಿಯಂತ್ರಣ ತಪ್ಪಿದ ಭತ್ತ ತುಂಬಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ಕ್ಲೀನರ್ ಗಾಯಗೊಂಡ ಘಟನೆ ಸ್ಥಳೀಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಮನೂರು ಬ್ರಿಡ್ಜ್ ಬಳಿ ಇಂದು ನಡೆದಿದೆ.

ಹರಿಹರ ಕಡೆಯಿಂದ ನಗರಕ್ಕೆ ಬರುತ್ತಿದ್ದ ಲಾರಿ ಬ್ರಿಡ್ಜ್ ಬಳಿ ನಿಯಂತ್ರಣ ತಪ್ಪಿದ್ದು, ಆ ತಿರುವಿನಲ್ಲಿ ಮಳೆಯ ನೀರು ನಿಂತಿದ್ದು, ಚಾಲಕ ರಸ್ತೆ ಕಾಣದೆ ಲಾರಿಯನ್ನು ತಗ್ಗಿಗೆ ಇಳಿಸಿದ್ದಾನೆ ಎನ್ನಲಾಗಿದೆ. 

ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ.

error: Content is protected !!