ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ಬಸ್‌ ನಿಲ್ದಾಣ

ಹರಿಹರ, ಏ.7-  ನಗರದಲ್ಲಿ ಸಾರಿಗೆ ನೌಕರರು ಮುಷ್ಕರ ಪ್ರಾರಂಭಿಸಿದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯಾವುದೇ ಬಸ್ ಸಂಚಾರ ಇರದೆ ನಿಲ್ದಾಣ ಬಿಕೋ ಎನ್ನುತ್ತಿತ್ತು.

ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಆಗ್ರಹಿಸಿ, ರಾಜ್ಯಾದ್ಯಂತ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿ ದ್ದಾರೆ. ಅದರಂತೆ ನಗರ ಬಸ್ ನಿಲ್ದಾಣದಲ್ಲಿ ದಿನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದ ಬಸ್‌ ಗಳು ಬಾರದೆ ನಿಲ್ದಾಣ ಬಿಕೋ ಎನ್ನುತ್ತಿತ್ತು.  ಬಸ್ ನಿಲ್ದಾಣ ಖಾಲಿ ಇದ್ದದ್ದರಿಂದ ಯುವಕರು ಸೈಕಲ್‌ ಓಡಿಸುವುದು ಹಾಗೂ ಕ್ರಿಕೆಟ್ ಆಟವನ್ನು ಆಡಿದರು. ಖಾಸಗಿ ಬಸ್ ಮಾಲೀಕರು ಹೆಚ್ಚು ಬಸ್‌ಗಳನ್ನು ಬಿಟ್ಟಿದ್ದರಿಂದ ಸ್ವಲ್ಪ ಮಟ್ಟಿಗೆ ಸಾರ್ವಜನಿಕರಿಗೆ ತೊಂದರೆ ತಪ್ಪಿದಂತಾಯಿತು.

error: Content is protected !!