`ಯುವರತ್ನ’ ಚಿತ್ರ ವೀಕ್ಷಿಸಿದ ಮಠಾಧೀಶರು

ದಾವಣಗೆರೆ, ಏ.8- ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರವನ್ನು ಹರಿಹರ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಗುರುವಾರ ವೀಕ್ಷಿಸಿದರು. ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ, ಹರಿಹರ ಸಿಪಿಐ ಸತೀಶ್, ಪಿಎಸ್‌ಐ ವೀರೇಶ್ ಸಾಥ್ ನೀಡಿದರು.

ಚಿತ್ರ ವೀಕ್ಷಣೆ ನಂತರ ಪುನೀತ್ ರಾಜ್ ಕುಮಾರ್ ಅವರು ದೂರವಾಣಿ ಮೂಲಕ ಚಿತ್ರದ ಬಗೆಗಿನ ಮಠಾಧೀಶರ ಅಭಿಪ್ರಾಯ ಕೇಳಿ, ಕೃತಜ್ಞತೆ ಸಲ್ಲಿಸಿದ್ದಾರೆ. ನಂತರ ತಮ್ಮ ಇನ್‌ಸ್ಟ್ರಾಗ್ರಾಂ ಮೂಲಕವು ಶ್ರೀಗಳಿಗೆ ಕೃತಜ್ಞತೆ ತಿಳಿಸಿದ್ದಾರೆ.

error: Content is protected !!