ಹೊನ್ನಾಳಿ : ಪುಲ್ವಾಮಾ ಹುತಾತ್ಮರಿಗೆ ಶ್ರದ್ಧಾಂಜಲಿ

ಹೊನ್ನಾಳಿ, ಫೆ. 16- ಜಮ್ಮು ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಇಲ್ಲಿನ ಟೌನ್‌ಹಾಲ್‌ನಲ್ಲಿ ನಡೆದ ಶ್ರದ್ಧಾಂಜಲಿ ಹಾಗೂ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ, ನಿವೃತ್ತ ಸೇನಾಧಿಕಾರಿ ಎಂ. ವಾಸಪ್ಪ, ಮಾಲತೇಶ್ ಶಿವಮೊಗ್ಗ, ಎಂ. ಬಾಬು ಅವರು ಉಪಸ್ಥಿತರಿದ್ದು, ಫುಲ್ವಾಮಾ ದಾಳಿಯಲ್ಲಿ ಮಡಿದ ಸಿಆರ್‌ಪಿಎಫ್‌ನ ವೀರ ಯೋಧ ಬಗ್ಗೆ ಮಾತನಾಡಿದರು. ನಂತರ ಮೌನಾಚರಣೆ ಮಾಡಿ ಕ್ಯಾಂಡಲ್ ಲೈಟ್ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

error: Content is protected !!