ಅಡಿಕೆ ಹಾಳೆ ತಟ್ಟೆ ತಯಾರಿಕಾ ತರಬೇತಿ

ಹೊನ್ನಾಳಿ, ಫೆ.17- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹೊನ್ನಾಳಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಂಘಗಳ ಸದಸ್ಯರ ಬಲವರ್ಧನೆಗಾಗಿ ನಬಾರ್ಡ್ ಕಾರ್ಯಕ್ರಮದಡಿ ಅಡಿಕೆ ಹಾಳೆ ತಟ್ಟೆ ತಯಾರಿಕಾ ತರಬೇತಿಯ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಸಂಘದ ತಾಲ್ಲೂಕು ಯೋಜನಾಧಿಕಾರಿ ಬಸವರಾಜ್ ಅಂಗಡಿ , ಕಿರಣ್ ಕುಮಾರ್ ಅಡಿಕೆ ಹಾಳೆ ತಟ್ಟೆ ತಯಾರಿಕೆ ಕುರಿತು ಮಾಹಿತಿ ನೀಡಿದರು. ಹೊನ್ನಾಳಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಠಲ್ ಮಾಳಗಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಿ. ಬಸವರಾಜ್, ಧಾರವಾಡ ಜ್ಞಾನವಿಕಾಸ ತರಬೇತಿ ಸಂಸ್ಥೆ ಪ್ರಾಂಶುಪಾಲ ಸಂತೋಷ್ ರಾವ್, ಉಪನ್ಯಾಸಕಿ ವೈಷ್ಣವಿ ರೆಡ್ಡಿ, ಜಿಲ್ಲಾ ಎನ್‌ಆರ್‌ಎಲ್‌ಎಂ ಸಮನ್ವಯಾಧಿಕಾರಿ ಧರ್ಮೇಂದ್ರ ಉಪಸ್ಥಿತರಿದ್ದರು. ರಚನಾ ಸ್ವಾಗತಿಸಿ, ಮಂಜುಳಾ ನಿರೂಪಿಸಿದರು. ಧರ್ಮೇಂದ್ರ ವಂದಿಸಿದರು. 

error: Content is protected !!