ರೇಷನ್ ಕಿಟ್ ವಿತರಿಸಿದ ಯಶವಂತರಾವ್

ದಾವಣಗೆರೆ, ಏ.12- ನಗರದ ಹೊಂಡದ ವೃತ್ತದಲ್ಲಿ ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರ ಪಾಲಿಕೆ ಸದಸ್ಯ ರಾಕೇಶ್ ಜಾಧವ್ ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್ಪಿ ಹನುಮಂತರಾಯ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್,  ನಗರ ಪಾಲಿಕೆ ಮೇಯರ್ ಬಿ.ಜಿ. ಅಜಯ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಕಾರ್ಯದರ್ಶಿ ಗೋಪಾಲ್ ರಾವ್ ಮಾನೆ, ಮಂಡಲ ಅಧ್ಯಕ್ಷ ಆನಂದರಾವ್ ಸಿಂಧೆ ಸೇರಿದಂತೆ ಇತರರು ಇದ್ದರು.

error: Content is protected !!