ಸಿ.ವಿ. ರಾಮನ್ ಕಾಲೇಜು : ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ದಾವಣಗೆರೆ, ಫೆ. 25- ನಗರದ ನಿಟುವಳ್ಳಿ ರಸ್ತೆಯಲ್ಲಿರುವ ಡಾ. ಸಿ.ವಿ. ರಾಮನ್ ಕಾಲೇಜಿನಲ್ಲಿ ಈಚೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಆಚರಿಸಲಾಯಿತು.

ಎಸ್‌ಜೆವಿಪಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಎ.ಬಿ. ರಾಮಚಂದ್ರಪ್ಪ, ದಾವಣಗೆರೆ ವಿವಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಜೆ.ಕೆ. ರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನ ವಿಷಯದಲ್ಲಿ ಆಸಕ್ತಿ ತೋರುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಎನ್.ಸಿ. ಪ್ರಶಾಂತ್, ಸಂಸ್ಥೆಯ ಕಾರ್ಯದರ್ಶಿಯೂ ಆದ ನಗರ ಪಾಲಿಕೆ ಮಾಜಿ ಮಹಾಪೌರರಾದ ಶ್ರೀಮತಿ ವಿ. ಅಶ್ವಿನಿ ಉಪಸ್ಥಿತರಿದ್ದರು.

error: Content is protected !!