ನಿಟ್ಟೂರು : ಅಧಿಕಾರಿಗಳಿಂದ ಶ್ರಮದಾನ

ಮಲೇಬೆನ್ನೂರು, ಫೆ.26- ನಿಟ್ಟೂರು ಗ್ರಾಮದಲ್ಲಿ ಶನಿವಾರ ರಾತ್ರಿ ಗ್ರಾಮ ವಾಸ್ತವ್ಯ ಮಾಡಿದ್ದ ಅಧಿಕಾರಿಗಳು ಭಾನುವಾರ ಬೆಳಿಗ್ಗೆ ಸ್ವಚ್ಛತಾ ಕಾರ್ಯಕ್ರಮದ ಮೂಲಕ ಶ್ರಮದಾನ ಮಾಡಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣಗಳನ್ನು ಸ್ವಚ್ಛಗೊಳಿಸಿದ ಅಧಿಕಾರಿಗಳಿಗೆ ಗ್ರಾಮದ ಯುವಕರು ಕೈ ಜೋಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ ಅವರು, ನಿಟ್ಟೂರು ಗ್ರಾಮದ ಸಮಸ್ಯೆಗಳ ಬಗ್ಗೆ ಬಂದಿರುವ ಅರ್ಜಿಗಳು ಮತ್ತು ನಾವು ಕಣ್ಣಾರೆ ಕಂಡಿರುವ ಕೆಲವು ಅವ್ಯವಸ್ಥೆಗಳನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿ, ಗ್ರಾಮಸ್ಥರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಉಪತಹಶೀಲ್ದಾರ್‌ ಆರ್‌. ರವಿ, ಕಂದಾಯ ನಿರೀಕ್ಷಕ ಆನಂದ್‌, ಗ್ರಾಮ ಲೆಕ್ಕಾಧಿಕಾರಿ ಶ್ರೀಧರ್‌, ಗ್ರಾಮ ಸಹಾಯಕರಾದ ಮಾರುತಿ, ರಂಗನಾಥ್‌, ರಾಜಪ್ಪ, ಸಂತೋಷ್‌ ಮತ್ತಿತರರು ಈ ವೇಳೆ ಹಾಜರಿದ್ದರು.

error: Content is protected !!