ನ್ಯಾಮತಿಯಲ್ಲಿ 389 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ

ನ್ಯಾಮತಿ, ಮಾ.7- ಪಟ್ಟಣದ ಮಹಂತೇಶ ಕಲ್ಯಾಣ ಮಂದಿರದಲ್ಲಿ ತಾಲ್ಲೂಕಿನ ಬೆಳಗುತ್ತಿ ಹೋಬಳಿ ವ್ಯಾಪ್ತಿಯ ವಿವಿಧ ಸರ್ಕಾರಿ ಸೌಲಭ್ಯ ಪಡೆದ 389 ಫಲಾನುಭವಿಗಳಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಆದೇಶ ಪತ್ರ ವಿತರಿಸಿದರು.

ಜನರು ನಮ್ಮನ್ನು ಆಯ್ಕೆ ಮಾಡುವುದು ಅವರ ಕಷ್ಟಕ್ಕೆ ಸ್ಪಂದಿಸಲಿ ಎಂದು . ಅಂತಹ ಜನರನ್ನು ಅಧಿಕಾರಿಗಳು ಕಚೇರಿಗಳಿಗೆ ಅಲೆದಾಡಿಸುವ ಬದಲು  ಅವರ ಕೆಲಸಗಳನ್ನು ಮಾಡಿಕೊಡುವ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ರೇಣುಕಾಚಾರ್ಯ ಹೇಳಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಎಸ್.ಪಿ. ರವಿಕುಮಾರ್, ತಹಶೀಲ್ದಾರ್ ತನುಜಾ ಟಿ. ಸವದತ್ತಿ, ಉಪ ತಹಶೀಲ್ದಾರ್ ನಾಗರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಂಧ್ಯಾ ಸುರಕ್ಷಾ ಯೋಜನೆಯಡಿ 178, ಇಂದಿರಾಗಾಂಧಿ ವ್ಯದ್ಧಾಪ್ಯ ವೇತನ 97, ವಿಧವಾ ವೇತನ 73, ಅಂಗವಿಕಲ ವೇತನ 37, ಮನಸ್ವಿನಿ 3 ಹಾಗೂ ರೈತರ ವಿಧವಾ ವೇತನದ ಒಂದು ಆದೇಶ ಪ್ರತಿಗಳನ್ನು ವಿತರಿಸಿದರು. 

error: Content is protected !!