ಕ.ಸಾ.ಪ. ಚುನಾವಣೆ : ಹೋಬಳಿವಾರು ಮತದಾನ ಕೇಂದ್ರ ತೆರೆಯಲು ಮನವಿ

ಹರಪನಹಳ್ಳಿ, ಮಾ.14- ತಾಲ್ಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾನ ಕೇಂದ್ರಗಳನ್ನು ಹೋಬಳಿಗೊಂದು ತೆರೆಯಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ತಹಶೀಲ್ದಾರ್ ಎಲ್.ಎಂ. ನಂದೀಶ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾದ ಡಿ.ರಾಮನಮಲಿ ಮಾತನಾಡಿ,  ಮುಂಬರುವ ಮೇ ತಿಂಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ   ಜಿಲ್ಲೆ ಮತ್ತು ರಾಜ್ಯ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹರಪನಹಳ್ಳಿ ತಾಲ್ಲೂಕಿನಲ್ಲಿ ಹೆಚ್ಚು ಮತದಾರರಿದ್ದಾರೆ. ಅದರಲ್ಲೂ ಗ್ರಾಮಾಂತರ ಪ್ರದೇಶದಿಂದ ಹೆಚ್ಚು ಮತದಾರರಿರುವುದರಿಂದ  ಅವರಿಗೆ ತಾಲ್ಲೂಕು ಕೇಂದ್ರಕ್ಕೆ ಬಂದು ಮತದಾನ ಮಾಡಲಿಕ್ಕೆ ತೊಂದರೆ ಆಗುತ್ತಿದೆ. ಆ ಕಾರಣಕ್ಕಾಗಿ ಅಧಿಕಾರಿಗಳು ಕಾಳಜಿ ವಹಿಸಿ ಹೋಬಳಿವಾರು ಮತದಾನ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಗೌರವ ಕಾರ್ಯದರ್ಶಿ ಸಿ.ಗಂಗಾಧರ,  ಹೇಮಣ್ಣ ಮೋರಗೆರೆ, ಇಸ್ಮಾಯಿಲ್ ಎಲಿಗಾರ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

error: Content is protected !!