ದಾವಣಗೆರೆ, ಆ.2- ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪ್ರಯುಕ್ತ ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ನೀಡಿದ ಆರೋಗ್ಯ ಸೇವೆಯನ್ನು ಪರಿಗಣಿಸಿ, 2020 ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನು ಜಿಲ್ಲಾ ವೈದ್ಯಾಧಿಕಾರಿ ಡಾ. ಚಂದ್ರಕಾಂತ ಎಸ್.ನಾಗಸಮುದ್ರ ಅವರಿಗೆ ನೀಡಿ ಗೌರವಿಸಲಾಗಿದೆ. ಶ್ರೀ ಮುರಳೀಧರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೂಡಾ ಅಧ್ಯಕ್ಷ ಶಿವಕುಮಾರ್ ರಾಜನಹಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಎಂ.ಮಲ್ಲೇಶಪ್ಪ ಕುಕ್ಕುವಾಡ ಅಧ್ಯಕ್ಷತೆ ವಹಿಸಿದ್ದರು.
July 4, 2024