ತೆರಿಗೆ ವಸೂಲಾತಿ ಆಂದೋಲನ

ಹರಿಹರ, ಮಾ.18- ನಗರಸಭೆ ವತಿಯಿಂದ ನಗರಸಭೆ ಮುಂಭಾಗ ದಲ್ಲಿ ವಿಶೇಷ ತೆರಿಗೆ ವಸೂಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು,  ಸರ್ಕಾರದ ರಿಯಾಯ್ತಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತೆ ಎಸ್. ಲಕ್ಷ್ಮಿ ತಿಳಿಸಿದರು.

ಅವರು ತೆರಿಗೆ ವಸೂಲಾತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ನಗರದ ಎಲ್ಲಾ ವಾಣಿಜ್ಯ ಮಳಿಗೆಗಳ ಆಸ್ತಿ ಮಾಲೀಕರು ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ, ಟ್ರೇಡ್ ಲೈಸೆನ್ಸ್ ಶುಲ್ಕಗಳನ್ನು ಸ್ಥಳದಲ್ಲಿಯೇ ಪಾವತಿಸಿ ಆಸ್ತಿ ತೆರಿಗೆ ಮೇಲೆ ಶೇ.5 ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು. 

ನಗರಸಭೆ ಸದಸ್ಯರಾದ ಮುಜಾಮಿಲ್, ವಿಜಯ್, ಆರ್‌.ಐ. ಮಂಜುನಾಥ್, ವಸಂತ್, ಕಿರಣ್, ಗಾಯತ್ರಿ, ಪ್ರಕಾಶ್ ಇನ್ನಿತರರಿದ್ದರು.

error: Content is protected !!