ಅನ್ನದಾನೇಶ್ವರ ಮಠದ ಸಮುದಾಯ ಭವನಕ್ಕೆ ಅನುದಾನ : ಸಿಎಂಗೆ ಮನವಿ

ದಾವಣಗೆರೆ, ಮಾ. 18- ನಗರದ ಶ್ರೀ ಅನ್ನದಾನೇಶ್ವರ ಮಠದ ಸಮುದಾಯ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ  ವೀರಪ್ಪ ಎಂ. ಬಾವಿ, ಟ್ರಸ್ಟ್‌ನ ಉಪಾಧ್ಯಕ್ಷ ಅಮರಯ್ಯ ಗುರುವಿನಮಠ, ಕಾರ್ಯದರ್ಶಿ ಎನ್. ಅಡಿವೆಪ್ಪ, ಎನ್. ಶಿವಪುತ್ರಪ್ಪ, ಟಿ. ಮಹಾಲಿಂಗೇಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!