ಹರಿಹರ : ಶಾಲಾ ಕಟ್ಟಡಕ್ಕೆ ಅನುದಾನ ಕೋರಿ ಸಚಿವರಿಗೆ ಮನವಿ

ಹರಿಹರ, ಮಾ.18- ಮಾಜಿ ಶಾಸಕ ಬಿ.ಪಿ. ಹರೀಶ್ ನೇತೃತ್ವದಲ್ಲಿ ನಗರದ ಡಿಆರ್‌ಎಂ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಅಮೃತ ಮಹೋತ್ಸವ ಕಟ್ಟಡಕ್ಕೆ ಅನುದಾನ ನೀಡುವಂತೆ ಕೋರಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ  ಸ್ವೀಕರಿಸಿದ ಶಿಕ್ಷಣ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಹಾಜರಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

error: Content is protected !!