ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳ ತರಬೇತಿ ಕಾರ್ಯಾಗಾರ

ದಾವಣಗೆರೆ, ಮಾ.22 – ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ ಇವರುಗಳ ಸಂಯುಕ್ತಾಶ್ರಯದಲ್ಲಿ, ದಾವಣಗೆರೆ-ಹರಿಹರ ಮತ್ತು ಜಗಳೂರು ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರವನ್ನು ದೊಡ್ಡಬಾತಿಯಲ್ಲಿರುವ ದಾವಣಗೆರೆ ಡೈರಿ ಕಛೇರಿಯಲ್ಲಿ  ಜರುಗಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಜಗದೀಶಪ್ಪ ಬಣಕಾರ್  ನೆರವೇರಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎನ್. ಎ.ಮುರುಗೇಶ್ ಅವರು ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್‍ ಉಪಾಧ್ಯಕ್ಷ ಹೆಚ್ ಬಸವರಾಜಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಬಿ.ಶೇಖರಪ್ಪ, ದಾವಣಗೆರೆ-ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‍ ನಿರ್ದೇಶಕಗಳಾದ ಎಸ್‍.ಕೆ ವೀರಣ್ಣ, ಶಂಕರ್‍ ಖಟಾವ್ಕರ್‍ ಮತ್ತಿತರರು ಭಾಗವಹಿಸಿದ್ದರು.

error: Content is protected !!