ದಾವಣಗೆರೆ, ಏ.27- ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಆರಾಧನಾ ಮಹೋತ್ಸವದ ಪ್ರಯುಕ್ತ ಆಹಾರ ಸಾಮಗ್ರಿಗಳ ಕಿಟ್ಟನ್ನು ಭಗವಾನ್ ಶ್ರೀ ಸತ್ಯಸಾಯಿ ಸೇವಾ ಸಮಿತಿ ವಿತರಿಸಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೂಲಕ ಜಿಲ್ಲಾಧಿಕಾರಿಯವರ ಕಚೇರಿಗೆ 200 ಕಿಟ್ಗಳನ್ನು ವಿತರಿಸಲಾಯಿತು. ಶ್ರೀ ಸತ್ಯಸಾಯಿ ಬಾಬಾರವರ ಮಂದಿರದಲ್ಲಿ ಆಟೋ ಚಾಲಕರಿಗೆ ಹಾಗೂ ಪಾಲಿಕೆ ಸ್ವಚ್ಛತಾ ಕಾರ್ಮಿಕರಿಗೆ 100 ಕಿಟ್ಗಳನ್ನು ವಿತರಿಸಲಾಯಿತು. ಪಿ.ಜೆ. ಬಡಾವಣೆಯ ಆರ್ಥಿಕವಾಗಿ ಹಿಂದುಳಿದ ಕುಟುಂಬಗಲಿಗೆ 100 ಕಿಟ್ಗಳನ್ನು ನೀಡಲಾಯಿತು ಎಂದು ಸಮಿತಿ ಜಿಲ್ಲಾಧ್ಯಕ್ಷ ಜಿ.ಆರ್. ವಿಜಯಾನಂದ್ ತಿಳಿಸಿದ್ದಾರೆ.
July 23, 2024