ಹರಿಹರ, ಜೂ.2- ಬೆಸ್ಕಾಂ ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿ. ಎಲ್ಲ ಅಧಿಕಾರಿ ನೌಕರರು ಹರಿಹರ ಬೆಸ್ಕಾಂ ಕಚೇರಿ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ವಿದ್ಯುತ್ ಕಾಯ್ದೆ ಪ್ರಸ್ತಾಪಿತ ತಿದ್ದುಪಡಿ 2020 ಹಾಗೂ ವಿದ್ಯುತ್ ಕ್ಷೇತ್ರದಲ್ಲಿ ಹೊರಗುತ್ತಿಗೆ ಹಾಗೂ ಖಾಸಗೀಕರಣ ವಿಷಯಗಳ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಅಧಿಕಾರಿ ಸಿ.ಎನ್. ರಮೇಶ್, ನೌಕರರ ಸಂಘದ ಸ್ಥಳೀಯ ಅಧ್ಯಕ್ಷ ಪರಮೇಶ್ವರಪ್ಪ, ಪರಿಶಿಷ್ಟ ಜಾತಿ, ಪಂಗಡದ ಅಧ್ಯಕ್ಷ ಎಸ್.ಬಿ. ಶಿವಪ್ಪ, ಕಾರ್ಯದರ್ಶಿ ಬಿ.ಎಂ. ಕರಿಬಸಯ್ಯ, ಶಾಖಾಧಿಕಾರಿಗಳಾದ ಮಾರ್ಕಂಡೇಯ, ರಾಘವೇಂದ್ರ ಮತ್ತಿತರರು ಭಾಗವಹಿಸಿದ್ದರು.
July 24, 2024