ಎಸ್ಸೆಸ್ ಕಪ್-2020 ಟೆನ್ನಿಸ್ ಬಾಲ್ ಟೂರ್ನಿಮೆಂಟ್‌ಗೆ ಚಾಲನೆ

ದಾವಣಗೆರೆ, ಜೂ.11- ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ವತಿಯಿಂದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ  ಎಸ್ಸೆಸ್ ಕಪ್-2020 ಟೆನ್ನಿಸ್ ಬಾಲ್ ಕ್ರಿಕೆಟ್‌ ಟೂರ್ನಿಮೆಂಟ್‌ಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ  ಅವರು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಬಡಾವಣೆ ಠಾಣೆ ಪಿ.ಎಸ್.ಐ ಅಶ್ವಿನ್ ಕುಮಾರ್, ದಾವಣಗೆರೆ ದಕ್ಷಿಣ ಸಂಚಾರಿ ಪಿಎಸ್ಐ ಕಿರಣ್ ಕುಮಾರ್, ಕ್ರೀಡಾ ಪ್ರೋತ್ಸಾಹಕರಾದ ಶ್ರೀನಿವಾಸ್ ಶಿವಗಂಗಾ, ಮಹಾದೇವ್, ರಾಜು ರೆಡ್ಡಿ, ರಮೇಶ್, ಸುರೇಶ್, ಶೌಕತ್, ರವಿ, ಸುರಭಿ ವಿನಯ್, ಕೆ. ಎಲ್. ಹರೀಶ್ ಬಸಾಪುರ, ಕುರುಡಿ ಗಿರೀಶ್, ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!