ಬಿಜೆಪಿ ಎಸ್ಸಿ ಮೋರ್ಚಾ ಸಭೆ

ದಾವಣಗೆರೆ, ಅ.4- ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕಾರಣಿ ಸಭೆಯು ಇಂದು ನಡೆಯಿತು. ಬಿಜೆಪಿ ಮಾಜಿ ಜಿಲ್ಲಾ ಧ್ಯಕ್ಷ ಯಶವಂತರಾವ್‌ ಜಾಧವ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ನಗರ ಪಾಲಿಕೆ ಸದಸ್ಯರೂ ಆದ ಬಿಜೆಪಿ ಎಸ್ಸಿ ಮೋರ್ಚಾ ಮಾಜಿ ಅಧ್ಯಕ್ಷ ಬಿ.ಗೋಣೆಪ್ಪ, ನಗರ ಪಾಲಿಕೆ ಸದಸ್ಯ ಸ್ವಾಗಿ ಶಾಂತಕುಮಾರ್, ಒಬಿಸಿ ಮೋರ್ಚಾ ಅಧ್ಯಕ್ಷ ನಿಂಗೋಜಿರಾವ್‌ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸಿ ಮೋರ್ಚಾ ಅಧ್ಯಕ್ಷ ಅಂಜಿನಪ್ಪ ಎಂ. ಶಾಮನೂರು ವಹಿಸಿದ್ದರು.ಪದಾಧಿಕಾರಿಗಳಾದ ಅಣ್ಣಪ್ಪ ರಾಗಿಮಸಲವಾಡ, ಒ.ಬಸವರಾಜ್, ರಾಘು, ಮಂಜುನಾಥ್ ಪೈ, ಕೆ.ಆರ್.ಸಂತೋಷ್, ಶ್ರೀನಿವಾಸ್, ಕೃಷ್ಣಮೂರ್ತಿ, ಗುಡ್ಡಪ್ಪ, ಪ್ರದೀಪ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!