ದಾವಣಗೆರೆ, ಅ.3- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಿದ್ದಗಂಗಾ ವಿದ್ಯಾಸಂಸ್ಥೆ ಆವರಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಪಡೆದ ಮಹಾರುದ್ರಪ್ಪ ಮೆಣಸಿನಕಾಯಿ, ಸಿದ್ದಗಂಗಾ ಶಾಲೆಯ ಮುಖ್ಯೋಪಾಧ್ಯಾಯಿನಿ ಜಸ್ಟಿನ್ ಡಿಸೌಜಾ, ಪಾಲಿಕೆ ಉಪ ಆಯುಕ್ತ ಪ್ರಭುಸ್ವಾಮಿ, ಬೆಂಗಳೂರು ಮಣಿ ಪಾಲ ಆಸ್ಪತ್ರೆಯ ಅರುಣ ಚಕ್ರವರ್ತಿ ಮತ್ತಿತರರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೀರಪ್ಪ ಎಂ.ಬಾವಿ, ಸಂಘದ ರಾಜ್ಯ ಘಟಕದ ನಿರ್ದೇಶಕ ಕೆ.ಚಂದ್ರಣ್ಣ, ವರದಿಗಾರರ ಕೂಟದ ಅಧ್ಯಕ್ಷ ಜಿಎಂಆರ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ಇ.ಎಂ.ಮಂಜುನಾಥ, ಖಜಾಂಚಿ ಮಂಜಪ್ಪ ಮಾಗನೂರು, ನಿರ್ದೇಶಕ ರಾಮಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.