ಐಟಿಐ ವಿದ್ಯಾರ್ಥಿಗಳಿಗೆ ಜಾಗೃತಿ

ದಾವಣಗೆರೆ, ಅ.10- ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆಶ್ರಯದಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಇಂದು ಕೋವಿಡ್-19 ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ರೆಡ್ ಕ್ರಾಸ್ ಸಂಸ್ಥೆಯ ಛೇರ್ಮನ್ ಡಾ. ಎ.ಎಂ. ಶಿವಕುಮಾರ್ ಉಪ ನ್ಯಾಸ ನೀಡಿದರು. ಪ್ರಾಚಾರ್ಯ ಎನ್. ಏಕನಾಥ ಅಧ್ಯಕ್ಷತೆ ವಹಿಸಿದ್ದರು. 

ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿ.ಎ. ಉಮೇಶ ಶೆಟ್ಟಿ, ಕಾರ್ಯದರ್ಶಿ ಡಿ.ಎಸ್. ಸಾಗರ್, ನಿರ್ದೇಶಕ ಶಾಂತ ಪವಾರ್, ಮಹ್ಮದ್ ಇನಾಯತ್, ಕೃಷ್ಣನಾಯಕ್, ಆಂಜನೇಯ, ಎಂ.ಎಸ್. ರಾಜು, ಪಿ.ಎಂ. ವೀರೇಶ್ ಸೇರಿದಂತೆ ಇತರರು ಇದ್ದರು. 

ಎಸ್.ಬಿ. ಅಂಬಿಕಾ ಪ್ರಾರ್ಥಿಸಿದರು. ಹೆಚ್. ಮಂಜುನಾಥ ವಂದಿಸಿದರು.

error: Content is protected !!