ಇಂಧನ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

ದಾವಣಗೆರೆ, ಜು.9- ಇಂಧನ ಬೆಲೆ ಏರಿಕೆ ಖಂಡಿಸಿ  ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ) ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿತು.

ಜಯದೇವ ವೃತ್ತದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ನಾಗರಾಜ್ ಜಮ್ಮನಹಳ್ಳಿ ನೇತೃತ್ವದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಸರಣಿಯಲ್ಲಿ ಏರಿಕೆ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ತೈಲದ ಹಳೇ ಬೆಲೆಯನ್ನು ಪರಿಷ್ಕರಿಸಿ ಜಾರಿಗೆ ತರುವಂತೆ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವಾಹನ ಚಾಲಕರ ಘಟಕದ ಜಿಲ್ಲಾಧ್ಯಕ್ಷ ಬಿ.ಜಿ. ದಯಾನಂದ, ಆದಾಪುರ ನಾಗರಾಜಪ್ಪ, ಸೈಯದ್ ನಜೀರ್, ಶಿವಕುಮಾರ್, ಅನಿಲ್ ಕುಮಾರ್, ಜಿ.ಬಿ. ಸುದೀಪ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. 

error: Content is protected !!