ಆಶಾ ಕಾರ್ಯಕರ್ತೆಯರ ಮುಷ್ಕರಕ್ಕೆ ಮಹಿಳಾ ಕಾಂಗ್ರೆಸ್ ಬೆಂಬಲ

ಜಗಳೂರು, ಜು. 18- ಆಶಾ ಕಾರ್ಯಕರ್ತೆಯರ ಮುಷ್ಕರಕ್ಕೆ ಬೆಂಬಲ ಸೂಚಿಸಿದ ಮಹಿಳಾ ಕಾಂಗ್ರೆಸ್ ಮತ್ತು ಆಶಾ ಕಾರ್ಯಕರ್ತೆಯರು ಅಭಿಯಾನ ದಲ್ಲಿ ಪಾಲ್ಗೊಂಡು ಸರಕಾರಕ್ಕೆ ತಹಶೀಲ್ದಾರ್ ಮುಖಾಂತರ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಟಿ. ಕೆಂಚಮ್ಮ, ಮಹಿಳಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಸಾವಿತ್ರಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮದ್, ಎಸ್ಟಿ ಘಟಕದ ಅಧ್ಯಕ್ಷ ಬಿ.ಲೋಕೇಶ್ ,ಓಬಿಸಿ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಹಮದ್ ಅಲಿ, ಕಾಂಗ್ರೆಸ್ ಮುಖಂಡರಾದ ಹಟ್ಟಿ ತಿಪ್ಪೇಸ್ವಾಮಿ, ನಾಗರಾಜ್, ಸಿದ್ದಣ್ಣ, ಮಹಾಂತೇಶ್  ಹಾಗೂ ಇತರರು ಭಾಗವಹಿಸಿದ್ದರು.

error: Content is protected !!