ಕಿತ್ತೂರು, ಅ. 24- ವೀರ ರಾಣಿ ಕಿತ್ತೂರು ಚೆನ್ನಮ್ಮನ ಜನ್ಮದಿನೋತ್ಸವದ ಅಂಗವಾಗಿ ಚನ್ನಮ್ಮನ ಕಿತ್ತೂರಿನ ಚನ್ನಮ್ಮನ ಪ್ರತಿಮೆಗೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಮಹಾ ಸ್ವಾಮೀಜಿ ಮಾಲಾರ್ಪಣೆ ಮಾಡಿದರು. ರಾಣೆಬೆನ್ನೂರಿನ ಶಾಸಕ ಅರುಣಕುಮಾರ ಗುತ್ತೂರು, ಶ್ರೀಪೀಠದ ಧರ್ಮದರ್ಶಿ ಚಂದ್ರಶೇಖರ ಪೂಜಾರ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ ನವಲಗುಂದ, ಸಮುದಾ ಯದ ಹಿರಿಯ ಮುಖಂಡರಾದ ಡಿ.ಆರ್.ಪಾಟೀಲ್, ಜಿಲ್ಲಾಧ್ಯಕ್ಷ ಬಾಲಾಜಿ ಸಾವಳಗಿ, ಕಿರಣ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
July 23, 2024