ಮಲೇಬೆನ್ನೂರಿನ ಆರೋಗ್ಯ ಕೇಂದ್ರದಲ್ಲಿ ರಾಜ್ಯೋತ್ಸವ

ಮಲೇಬೆನ್ನೂರು, ನ.2- ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ  ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮಿದೇವಿ ಅವರ ನೇತೃತ್ವದಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಬಿಳಿ, ಹಳದಿ, ಕೆಂಪು ಬಣ್ಣದ ಸಮವಸ್ತ್ರ ಧರಿಸಿ ಗಮನ ಸೆಳೆದರು.

ಕಳೆದ 7-8 ತಿಂಗಳಿನಿಂದ ಕೊರೊನಾ ನಿಯಂ ತ್ರಣಕ್ಕಾಗಿ ಶ್ರಮಿಸಿದ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಈ ರೀತಿ ವಿಶೇಷವಾಗಿ ಆಚರಿಸಿ ಸಂಭ್ರಮಿಸಿದ್ದಾರೆಂದು ಡಾ. ಲಕ್ಷ್ಮಿದೇವಿ ತಿಳಿಸಿದ್ದಾರೆ.

error: Content is protected !!