ಎಲೆಬೇತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವ

ದಾವಣಗೆರೆ, ನ.3- ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 65ನೇ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಎಂ.ಷಡಕ್ಷರಪ್ಪ ಮಾತನಾಡಿ, ನಾವು ಕನ್ನಡಿಗರು ನಮ್ಮ ಮಾತೃಭಾಷೆ ಕನ್ನಡ. ಆದ್ದರಿಂದ ಪ್ರತಿ ಮನೆ ಮನೆಯಲ್ಲೂ ಕನ್ನಡವನ್ನು ಪ್ರತಿನಿತ್ಯ ಮಾತನಾಡಬೇಕು. ಅದೇ ರೀತಿ ಶಾಲಾ-ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ಬ್ಯಾಂಕುಗಳಲ್ಲಿ ಕನ್ನಡ ಬಳಕೆಯಾಗಬೇಕು.  ಕನ್ನಡ ನಾಡು ಸಂಸ್ಕೃತಿ, ಸಂಪದ್ಭರಿತ ನಾಡು ಎಂದು ಈ   ಸಂದರ್ಭದಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಫಕ್ಕೀರಪ್ಪ, ಶಾಲಾ ಮುಖ್ಯೋಪಾಧ್ಯಾಯರಾದ ಶಿವಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!