ಜಗಳೂರಿನ ಶಾಸಕರಿಂದ ವಿಶೇಷ ಪೂಜೆ

ಜಗಳೂರು, ಆ. 5 –  ಅಯೋಧ್ಯೆಯಲ್ಲಿ ಇಂದು ಶ್ರೀ ರಾಮಮಂದಿರ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಶಾಸಕ ಎಸ್. ವಿ. ರಾಮಚಂದ್ರ ಇಂದು ಪಟ್ಟಣದ ಶ್ರೀರಾಮ ದೇವಸ್ಥಾನದಲ್ಲಿ  ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಎಸ್. ಕೆ. ಮಂಜುನಾಥ್, ಸವಿತಾ ಕಲ್ಲೇಶಪ್ಪ, ಎಪಿಎಂಸಿ  ಅಧ್ಯಕ್ಷ ರೇಣುಕಾನಂದ,  ತಾಲ್ಲೂಕು ಬಿಜೆಪಿ ಅಧ್ಯಕ್ಷ ಎಚ್,  ಮಹೇಶ್, ಯುವ ಅಧ್ಯಕ್ಷ ಕಿರಣ್ ಕುಮಾರ್, ಜಿಪಂ ಮಾಜಿ ಸದಸ್ಯ ಎಚ್. ನಾಗರಾಜ್, ಡಿ.ವಿ. ನಾಗಪ್ಪ, ಬಿಸ್ತುವಳ್ಳಿ ಬಾಬು, ಪ.ಪಂ. ಸದಸ್ಯರಾದ ಆರ್. ತಿಪ್ಪೇಸ್ವಾಮಿ, ರೇವಣ್ಣ, ಪಾಪ ಲಿಂಗಪ್ಪ, ನವೀನ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು. 

error: Content is protected !!