ಹರಪನಹಳ್ಳಿಯಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ

ಹರಪನಹಳ್ಳಿ, ನ.21 – ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾದೇಶಿಕ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನು ಶಾಸಕ ಜಿ.ಕರುಣಾಕರರೆಡ್ಡಿ ಉದ್ಘಾಟಿಸಿದರು. ಈ ವೇಳೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ ಮೋಹನ್, (ಅರಣ್ಯ ಪಡೆ ಮುಖ್ಯಸ್ಥರು) ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ ಮೂರ್ತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಉಪ ವಿಭಾಗಾಧಿ ಕಾರಿ ಪ್ರಸನ್ನಕುಮಾರ ವಿ.ಕೆ.  ಡಿ.ವೈ.ಎಸ್.ಪಿ. ಮಲ್ಲೇಶ್‍ ದೊಡ್ಡಮನಿ, ವಲಯ ಅರಣ್ಯಾಧಿಕಾರಿ ಭರತ್ ಡಿ.ತಳವಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣಮ್ಮ. ಉಪಾಧ್ಯಕ್ಷ ಮಂಜನಾಯ್ಕ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸತ್ತೂರು ಹಾಲೇಶ, ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯದರ್ಶಿ ಆರ್.ಲೋಕೇಶ್, ಬಿಜೆಪಿ ತಾಲ್ಲೂಕು ಘಟಕದ ಉಪಾಧ್ಯಕ್ಷ ನಿಟ್ಟೂರು ಸಣ್ಣ ಹಾಲಪ್ಪ, ಮುಖಂಡರಾದ ಎಂ.ಪಿ. ನಾಯ್ಕ. ಬಾಗಳಿ ಕೋಟ್ರೇಶಪ್ಪ, ಕೆಂಗಳ್ಳಿ ಪ್ರಕಾಶ್ ಸೇರಿದಂತೆ ಇತರರು ಇದ್ದರು.

error: Content is protected !!