ಮಲೇಬೆನ್ನೂರು, ನ.21- ಕೊಕ್ಕನೂರು ಗ್ರಾಮದ ದೊಡ್ಡ ಬಾವಿ ತಟದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗಂಗಾಪರಮೇಶ್ವರಿ ದೇವಿಯ ದೇವಸ್ಥಾನದಲ್ಲಿ ದೇವಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವು ಶುಕ್ರವಾರ ಶ್ರೀ ಆಂಜನೇಯ ಸ್ವಾಮಿ ದೇವರ ಸಮ್ಮುಖದಲ್ಲಿ ನೆರವೇರಿತು. ಅಂಬಿಗರ ಚೌಡಯ್ಯ ಗುರುಪೀಠದ ಶ್ರೀ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ, ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಮತ್ತಿತರರು ಭಾಗವಹಿಸಿದ್ದರು.
July 6, 2024