ಹರಿಹರ, ಡಿ.10- ಪಟ್ಟಣದ ಪೊಲೀಸ್ ಸ್ಟೇಷನ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಾವಣಿ ಪದ ಹಾಗೂ ಬೀದಿ ನಾಟಕ ಆಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಡಿಎಚ್ಓ ಚಂದ್ರಮೋ ಹನ್ ಮಾತನಾಡಿ ರೋಗ ಹಾಗೂ ಚಿಕಿತ್ಸೆ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಮೇಲ್ವಿಚಾರಕ ಎಂ.ವಿ. ಹೊರಕೇರಿ, ಹಿರಿಯ ಆರೋಗ್ಯ ಸಹಾಯಕ ಎಂ. ಉಮ್ಮಣ್ಣ, ಕ್ಷಯರೋಗ ನಿಯಂತ್ರಣ ಮೇಲ್ವಿಚಾರಕ ಮಂಜುನಾಥ, ನಂದೀಶ್, ಶರೀಫ್, ದೊಡ್ಡಮನಿ ಸತೀಶ್, ಆರೋಗ್ಯ ಸಹಾಯಕರಾದ ದಾದಾಪೀರ್, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.