ಉಕ್ಕಡಗಾತ್ರಿಯಲ್ಲಿ ಬೆಳ್ಳಿ ರಥೋತ್ಸವ

ಮಲೇಬೆನ್ನೂರು, ಡಿ.23- ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಕಾರ್ತಿಕ ಮಾಸದ ಅಂಗವಾಗಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಬೆಳ್ಳಿ ರಥೋತ್ಸವವನ್ನು ಕೊರೊನಾ ಕಾರಣದಿಂದಾಗಿ ಸರಳವಾಗಿ ಸೋಮವಾರ ಆಚರಿಸಲಾಯಿತು.

ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ರಥಕ್ಕೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ರಥೋತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನ ಆವರಣದಲ್ಲಿ ಜರುಗಿದ ರಥೋತ್ಸವಕ್ಕೆ ವಿವಿಧ ಕಲಾಮೇಳಗಳು ಮೆರಗು ನೀಡಿದವು.

ಟ್ರಸ್ಟ್‌ ಕಮಿಟಿ ಕಾರ್ಯದರ್ಶಿ ಸುರೇಶ್‌ ಸೇರಿದಂತೆ ಟ್ರಸ್ಟ್‌ ಕಮಿಟಿ ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.

error: Content is protected !!