ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ವಾಜಪೇಯಿ ಪುಣ್ಯಸ್ಮರಣೆ

ದಾವಣಗೆರೆ, ಆ.18- ಮಾಜಿ ಪ್ರಧಾನಮಂತ್ರಿ ಭಾರತ ರತ್ನ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೆಯನ್ನು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿತ್ತು. ಶಾಸಕ ಎಸ್.ಎ. ರವೀಂದ್ರನಾಥ್, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಜಿಲ್ಲಾ ಅಧ್ಯಕ್ಷ ಹನಗವಾಡಿ ವೀರೇಶ್, ಯಶವಂತರಾವ್ ಜಾಧವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಮಂಜಾ ನಾಯಕ್, ಜಿಲ್ಲಾ ಕಾರ್ಯದರ್ಶಿ ಲಿಂಗರಾಜು ಗೌಳಿ, ಮಾಧ್ಯಮ ಪ್ರಮುಖ್ ಹೆಚ್.ಪಿ. ವಿಶ್ವಾಸ್, ಉತ್ತರ ಅಧ್ಯಕ್ಷ ಸಂಗನಗೌಡ್ರು, ಮಾಯಕೊಂಡ ಅಧ್ಯಕ್ಷ ದೇವೀಂದ್ರಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!