ಪೊಲೀಸ್ ಸನಾವುಲ್ಲಾ ಬಂಧನಕ್ಕೆ ಆಗ್ರಹ

ದಾವಣಗೆರೆ, ಆ.27- ಪವರ್ ಆಫ್ ಪಾಕಿಸ್ತಾನ್ ಎಂಬ ಸಂದೇಶ ಹರಿಬಿಟ್ಟಿದ್ದ ಸ್ಥಳೀಯ ಬಸವನಗರ ಪೊಲೀಸ್ ಠಾಣೆಯ ವಾಹನ ಚಾಲಕ ಸನಾವುಲ್ಲಾ ಅವರನ್ನು ಕೂಡಲೇ ಬಂಧಿಸುವುದಲ್ಲದೇ, ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ, ಶ್ರೀರಾಮ ಸೇನೆ ವತಿಯಿಂದ ನಗರ ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಸೇನೆಯ ರಾಜ್ಯ ಸಂಪರ್ಕ ಪ್ರಮುಖ್ ಪರಶುರಾಮ್ ನಡುಮನಿ, ಜಿಲ್ಲಾಧ್ಯಕ್ಷ ಮಣಿ ಸರ್ಕಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಬಿ. ವಿನೋದ್ ರಾಜ್ ಸೇರಿದಂತೆ ಇತರರು ಇದ್ದರು.

error: Content is protected !!