ಸಂಸದರಿಂದ ಹಿಂದೂ ಮಹಾ ಗಣಪತಿ ದರ್ಶನ

ದಾವಣಗೆರೆ,ಸೆ.3- ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹಿಂದೂ ಮಹಾ ಗಣಪತಿ ವತಿಯಿಂದ ಪ್ರತಿಷ್ಠಾಪಿಸಿರುವ ಗಣಪತಿಯ ದರ್ಶನವನ್ನು ಸಂಸದ ಜಿ.ಎಂ.ಸಿದ್ದೇಶ್ವರ ಅವರು ನಿನ್ನೆ ಪಡೆದರು. 

ಈ ಸಂದರ್ಭದಲ್ಲಿ ಹಿಂದೂ ಮಹಾ ಗಣಪತಿ ಸಮಿತಿಯ ಅಧ್ಯಕ್ಷ ಜೊಳ್ಳಿ ಗುರು, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಮಾಜಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ್, ಮುಖಂಡರಾದ ಜಗದೀಶ್, ಶ್ರೀನಿವಾಸ್ ದಾಸಕರಿಯಪ್ಪ, ಗೋಪಾಲ್ ರಾವ್ ಮಾನೆ,  ರಾಘವೇಂದ್ರ,
ಮಹಾನಗರ ಪಾಲಿಕೆ ಮಾಜಿ ಸದಸ್ಯ ಡಿ.ಕೆ. ಕುಮಾರ್ ಮತ್ತು ಗಂಗಾಧರ್ ಉಪಸ್ಥಿತರಿದ್ದರು.

error: Content is protected !!