ಶಾಸ್ತ್ರೀಹಳ್ಳಿಯಲ್ಲಿ ಇಂದು ಉಚಿತ ಆರೋಗ್ಯ ತಪಾಸಣೆ

ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 98 ನೇ ಜನ್ಮ ದಿನಾಚರಣೆಯ ಅಂಗವಾಗಿ ದಾವಣಗೆರೆ ತಾಲ್ಲೂಕಿನ ಶಾಸ್ತ್ರೀಹಳ್ಳಿಯ ಶ್ರೀ ಸತ್ಯಸಾಯಿ ವಿದ್ಯಾನಿಕೇತನ ಶಾಲೆಯ ಲ್ಲಿಂದು ಬೆಳಿಗ್ಗೆ 10.30 ರಿಂದ ಉಚಿತ ವೈದ್ಯಕೀಯ ಸೇವೆ ಮತ್ತು ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

ಈಶ್ವರಮ್ಮ ಟ್ರಸ್ಟ್ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್ ಮತ್ತು ಎಸ್.ಎಸ್.ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರಿಸರ್ಚ್ ಸೆಂಟರ್  ಇವರ ಸಹಯೋಗ ದೊಂದಿಗೆ ಎಸ್.ಎಸ್.ಕೇರ್ ಟ್ರಸ್ಟ್‌ನ ನಿರ್ದೇಶಕರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ಶಿಬಿರದಲ್ಲಿ ನೇತ್ರ ತಪಾಸಣೆ, ಕೀಲು-ಮೂಳೆ, ಮಕ್ಕಳ ವಿಭಾಗ, ಪ್ರಸೂತಿ, ಚರ್ಮ ರೋಗ, ಅರ್ಬುದ ರೋಗಗಳಿಗೆ ತಜ್ಞ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ನಡೆಯಲಿದೆ.

ತಪಾಸಣೆಗೊಳಗಾದ ಎಲ್ಲರಿಗೂ ಎಸ್.ಎಸ್.ಹೈಟೆಕ್ ಆಸ್ಪತ್ರೆಯ ವೈದ್ಯಕೀಯ ಕಾರ್ಡ್‌ಗಳನ್ನು ಉಚಿತವಾಗಿ ನೀಡಲಾಗುವುದು. ಈ ವೈದ್ಯಕೀಯ ತಪಾಸಣೆಯನ್ನು ಶಾಸ್ತ್ರೀಹಳ್ಳಿಯ ಸುತ್ತ ಮುತ್ತಲಿನ ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಈಶ್ವರಮ್ಮ ಟ್ರಸ್ಟ್ ಅಧ್ಯಕ್ಷರಾದ ಎ.ಆರ್.ಉಷಾ ರಂಗನಾಥ್‌  ಕೋರಿದ್ದಾರೆ.

error: Content is protected !!