ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಧೀಶರು

ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಧೀಶರು

ದಾವಣಗೆರೆ, ಫೆ.26- ಸಂವಿಧಾನದ ಪ್ರಮುಖ ಅಂಗವಾದ ನ್ಯಾಯಾಂಗವು ಕಳೆದ 75 ವರ್ಷಗಳಲ್ಲಿ ಜನರ ವಿಶ್ವಾಸವನ್ನು ಉಳಿಸಿಕೊಂಡು ಬರುವಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಅಭಿಪ್ರಾಯಪಟ್ಟರು.

ಅವರು ಇಂದು ಜಿಲ್ಲಾ ವಕೀಲರ ಸಾಂಸ್ಕೃತಿಕ ಸಭಾ ಭವನದಲ್ಲಿ ನೂತನವಾಗಿ ವರ್ಗಾವಣೆಗೊಂಡು ಬಂದಿರುವ ಪ್ರಧಾನ ಸಿವಿಲ್ ಜಡ್ಜ್ ಹೆಚ್.ಡಿ.ಗಾಯತ್ರಿ ಅವರಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ದೇಶವು ಗಣರಾಜ್ಯದ ಅಮೃತ ಮಹೋ ತ್ಸವವನ್ನು ಆಚರಿಸುವ ಸಂದರ್ಭದಲ್ಲಿ ಪ್ರಜಾ ಪ್ರಭುತ್ವ ಮತ್ತು ಗಣತಂತ್ರ ವ್ಯವಸ್ಥೆಯಲ್ಲಿ ನ್ಯಾಯಾಂ ಗದ ಪಾತ್ರ ಬಹಳ ಮುಖ್ಯವಾಗಿದ್ದು, ನ್ಯಾಯಾ ಧೀಶರು ಮತ್ತು ವಕೀಲರು ನ್ಯಾಯಾಂಗ ರಥದ ಎರಡು ಚಕ್ರಗಳಾಗಿದ್ದು, ರಥವನ್ನು ಮುನ್ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ. ವಿವಾದಗಳನ್ನು ಶೀಘ್ರವಾಗಿ ವಿಲೇ ವಾರಿ ಮಾಡುವ ಮೂಲಕ ನ್ಯಾಯಾಂಗದ ಘನತೆಯನ್ನು ಕಾಪಾಡಿಕೊಂಡು ಹೋಗಬೇಕಾಗಿದೆ ಎಂದು ತಿಳಿಸಿದರು.

ನೂತನವಾಗಿ ವರ್ಗಾವಣೆಗೊಂಡು ಬಂದಿರುವ ನ್ಯಾಯಾಧೀಶರಾದ ಹೆಚ್.ಡಿ.ಗಾಯತ್ರಿಯವರು ಮಾತನಾಡಿ, ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಯತ್ನಿಸುತ್ತೇವೆ ಎಂದರು. ಪ್ರಕರಣಗಳ ವಿಲೇವಾರಿಯಲ್ಲಿ ಹಿರಿಯ ವಕೀಲರು, ಹಿರಿಯ ನ್ಯಾಯಾಧೀಶರ ಸಹಕಾರದಿಂದ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತೇವೆ ಎಂದರು. 

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್‍ಕುಮಾರ್‍ ಮಾತನಾಡಿ, ಜಿಲ್ಲಾ ವಕೀಲರ ಸಂಘವು  ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ, ಪ್ರಕರಣಗಳ ವಿಲೇವಾರಿಯಲ್ಲಿ ನ್ಯಾಯಾಧೀಶರಿಗೆ ಗೌರವ ಕೊಡುವ ಮೂಲಕ ಅತೀ ಹೆಚ್ಚಿನ ಸಹಕಾರವನ್ನು ನೀಡುತ್ತಾ ಬಂದಿದೆ. ಲೋಕ ಅದಾಲತ್‍ನಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡುವ ಮೂಲಕ ಹೈಕೋರ್ಟ್‍ನ ಪ್ರಶಂಸನಾ ಪತ್ರಕ್ಕೆ ಸಂಘವು ಭಾಜನವಾಗಿದೆ ಎಂದು ತಿಳಿಸಿದರು. 

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ವಿ. ವಿಜಯಾನಂದ, ಶ್ರೀಪಾದ ಎನ್., ದಶರಥ್ ಬಿ., ಪ್ರವೀಣ್ ಕುಮಾರ್ ಆರ್.ಎನ್., ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಜಿ. ಸಲಗೆರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ನ್ಯಾಯಾಧೀಶರುಗಳಾದ ನಿವೇದಿತಾ, ರೇಷ್ಮಾ, ಅಫ್ತಾಬ್, ಮಲ್ಲಿಕಾರ್ಜುನ್, ಪ್ರಶಾಂತ್, ಸಿದ್ಧರಾಜು, ನಾಜಿಯಾ ಕೌಸರ್ ಮತ್ತು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಎಸ್. ಬಸವರಾಜ್, ಸಹಕಾರ್ಯದರ್ಶಿ ಎಸ್. ಮಂಜುನಾಥ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!