ನಗರದಲ್ಲಿ ಇಂದು `ಯುವಕರ ನಡೆ ಮೋದಿ ಕಡೆ’ ಕಾರ್ಯಕ್ರಮ

ದಾವಣಗೆರೆ, ಮಾ.1- ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಯುವಕರ ನಡೆ ಮೋದಿಯ ಕಡೆ ಬೈಕ್ ರಾಲಿ ಹಾಗೂ ಸಭಾ ಕಾರ್ಯಕ್ರಮವನ್ನು ನಾಳೆ ದಿನಾಂಕ 2ರ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವರಾಜ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಸಂಜೆ 4 ಗಂಟೆಗೆ ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ ಬೈಕ್ ರಾಲಿಗೆ ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್ ಚಾಲನೆ ನೀಡಲಿದ್ದಾರೆ ಎಂದರು.

ಸಂಜೆ 6 ಗಂಟೆಗೆ ಆಂಜನೇಯ ಬಡಾವಣೆಯ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಾಲ ವಾಗ್ಮಿ ಹಾರಿಕಾ ಮಂಜುನಾಥ್ ದಿಕ್ಸೂಚಿ  ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ಆಯೋಜಕ ಅತಿಥ್‌ ಅಂಬರ್‌ಕರ್, ಜಿಲ್ಲಾ ಸಾಮಾಜಿಕ ಮಾಧ್ಯಮ ಸಂಚಾಲಕ ಜಿ.ಕೊಟ್ರೇಶ್ ಗೌಡ, ಕೆ.ಎನ್. ಹನುಮಂತಪ್ಪ ಉಪಸ್ಥಿತರಿದ್ದರು.

error: Content is protected !!