ನೇಹಾ ಹತ್ಯೆ ಖಂಡಿಸಿ ಜಂಗಮ ಸಮಾಜದ ಪ್ರತಿಭಟನೆ
ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಖಂಡಿಸಿ ಜಿಲ್ಲಾ ಜಂಗಮ ಸಮಾಜದಿಂದ ನಗರದ ಜಯದೇವ ಸರ್ಕಲ್ನಲ್ಲಿ ಮೊನ್ನೆ ಮೇಣದ ಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಖಂಡಿಸಿ ಜಿಲ್ಲಾ ಜಂಗಮ ಸಮಾಜದಿಂದ ನಗರದ ಜಯದೇವ ಸರ್ಕಲ್ನಲ್ಲಿ ಮೊನ್ನೆ ಮೇಣದ ಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಲಾಯಿತು.
ನಾನು ಗೆದ್ದರೆ, ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡಿದವರಿಗೆ ನ್ಯಾಯ ಒದಗಿಸಿದಂತಾಗುತ್ತದೆ. ಸ್ವಾಭಿಮಾನದ ಚುನಾವಣೆ ಮಾಡೋಣ. ರಾಜಕಾರಣದಲ್ಲಿ ದುಡ್ಡು ಕೊಟ್ಟು ಓಟು ಪಡೆಯುವ ಪದ್ಧತಿ ನಿರ್ಮೂಲನೆ ಆಗಬೇಕು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಸಹಾಯದೊಂದಿಗೆ ಸೋಮವಾರ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು .
ಶ್ರೀರಾಮನ ಪರಮ ಭಕ್ತ ಹನುಮ ಜಯಂತಿ ಅಂಗವಾಗಿ ಜಿಲ್ಲಾದ್ಯಂತ ಮಾರುತಿ ಮಂದಿರಗಳಲ್ಲಿ ಶನಿವಾರ ಶ್ರದ್ಧಾ-ಭಕ್ತಿಯಿಂದ ಪೂಜೆ, ಪುನಸ್ಕಾರ ನೆರವೇರಿಸಲಾಯಿತು.
ಪ್ರಸ್ತುತ ವೃತ್ತಿಪರ ಪದವಿಗಳಲ್ಲಿ ಕೃಷಿಗೆ ಸಂಬಂಧಿಸಿದ ಪದವಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ ಎಂದು ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ಪ್ರದೀಪ್ ಪಾಟೀಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಸಂಪರ್ಕ ನಿಗಮ ಇವರ ಸಹಯೋಗದಲ್ಲಿ ನಗರದ ಹೈಸ್ಕೂಲ್ ಮೈದಾನದಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಬಸ್ಗಳಿಗೆ ಮತದಾನ ಜಾಗೃತಿ ಸ್ಟಿಕ್ಕರ್ ಅಳವಡಿಸುವ ಮೂಲಕ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು.
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಕೆಲವರು ವದಂತಿ ಹಬ್ಬಿಸಿದ್ದರು. ಈ ವದಂತಿಗೆ ಈಗ ತೆರೆ ಬಿದ್ದಿದೆ. ಚುನಾವಣಾ ಕಣದಲ್ಲಿ ಗೆಲುವಿಗೆ ಸೆಣಸಾಡಲಿದ್ದಾರೆ.
ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶ್ರೀಮತಿ ಲತಿಕಾ ದಿನೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ವಾರ್ಡ್ ಅಧ್ಯಕ್ಷರಾದ ಗೀತಾ ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ವಾರ್ಡ್ ಮುಖಂಡರಾದ ಜ್ಯೋತಿ ಅವರ ಸಮ್ಮುಖದಲ್ಲಿ ಮುದ್ದಳ್ಳಿ ತೋಟದ ಮಹಿಳೆಯರ ಜೊತೆ ಪೂರ್ವಭಾವಿ ಸಭೆಯನ್ನು ಇಂದು ನಡೆಸಲಾಯಿತು.
ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯ ಪ್ರವೃತ್ತರಾಗಬೇಕು. ನಮ್ಮ ಮುಂದಿನ ಪೀಳಿಗೆಗೆ ಶುದ್ಧವಾದ ಗಾಳಿ, ನೀರು ಸಿಗಬೇಕು ಅಂದರೆ ಈಗಿನಿಂದಲೇ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ, ಪರಿಸರ ಕೆಲಸದಲ್ಲಿ ಅವರನ್ನು ತೊಡಗಿಸಿಕೊಳ್ಳುವ ಕೆಲಸ ಆಗಬೇಕು
ನಗರದ ವಿಕಾಸ ತರಂಗಿಣಿ ವತಿಯಿಂದ ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ 29ನೇ ವರ್ಷದ ಮಜ್ಜಿಗೆ ವಿತರಣೆ ಕಾರ್ಯಕ್ರಮದಲ್ಲಿ ಶಿವಯೋಗ ಮಂದಿರ ವಾಯುವಿಹಾರ ಬಳಗದವರು ಮಜ್ಜಿಗೆ ವಿತರಿಸಿದರು.
18ನೇ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬೇಕೆಂದು ಜಿಂಕೆಯ ತದ್ರೂಪ ಹೊಂದಿರುವ ಬಯಲು ಸೀಮೆಯ ಕೊಂಡುಕುರಿ ರಂಗಯ್ಯನದುರ್ಗ ಅರಣ್ಯದಲ್ಲಿ ಸಿಗುವ ನಗುಮೊಗದ ಪ್ರಾಣಿ ಕೊಂಡುಕುರಿ ರಂಗ ಈ ಬಾರಿಯ ಚುನಾವಣಾ ಜಾಗೃತಿಗೆ ಮ್ಯಾಸ್ಕಟ್ ಆಗಿ ಬಳಕೆ ಮಾಡಲಾಗಿದೆ.
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಅಂತಿಮ ಕಣದಲ್ಲಿನ ಅಭ್ಯರ್ಥಿಗಳು ಚುನಾವಣಾ ಲೆಕ್ಕವನ್ನು ದಿನನಿತ್ಯ ನಿರ್ವಹಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.