ಈ ಬಾರಿ 400 ಸ್ಥಾನಗಳ ಗಡಿದಾಟುವ ಗುರಿ ನಮ್ಮದು
ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾ ರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ್ಜರಿ ರೋಡ್ ಷೋ ನಡೆಸಿದರು.
ದಾವಣಗೆರೆ ಲೋಕಸಭೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಹೇಳಿದರು.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ಕುರಿತ ಬೇಡಿಕೆಯನ್ನು ಆಲಿಸಲು ಸಮಯ ನೀಡಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಲಿಲ್ಲ. ಕಾಂಗ್ರೆಸ್ನಲ್ಲಿರುವ ಪಂಚಮಸಾಲಿ ಜನಪ್ರತಿನಿಧಿಗಳೂ ಮುಖ್ಯಮಂತ್ರಿ ಎದುರು ದಿಟ್ಟವಾಗಿ ಮಾತನಾಡುತ್ತಿಲ್ಲ
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಯಾರಿಗೆ ರಕ್ಷಣೆ ಬೇಕೋ ಅವರಿಗೆಲ್ಲ ರಕ್ಷಣೆ ಕೊಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಚನ್ನಗಿರಿ : ತಾಲ್ಲೂಕಿಗೆ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ನಾವು ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್ಗೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.
ಹೊನ್ನಾಳಿ : ಕರ್ನಾಟಕ ರಾಜ್ಯವನ್ನು ಕುರುಬ ಸಮುದಾಯದವರು ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಚಿಕ್ಕಬಳ್ಳಾ ಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಚನ್ನಗಿರಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಅವರು ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಗ್ರಾಮಸ್ಥರು ವಿನಯ್ ಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಜನರಿಂದ ಭಾರೀ ಬೆಂಬಲ ವ್ಯಕ್ತವಾಯಿತು.
ಹೊನ್ನಾಳಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿದರೆ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.
ಮಾಯಕೊಂಡ : ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರ ಕಾರ್ಯ ವೈಖರಿ ಮತ್ತು ಅಭಿವೃದ್ಧಿ ನೋಡಿ ಕಾಂಗ್ರೆಸ್ಗೆ ನಡುಕ ಉಂಟಾಗಿದೆ. ಸಿದ್ದೇಶ್ವರ ಅವರ ದೂರದೃಷ್ಟಿ, ಸಮಾಜಮುಖಿ ಕೆಲಸ ನೋಡಿ ಜನ ಅವರನ್ನು 4 ಬಾರಿ ಸಂಸದರಾಗಿ ಆಯ್ಕೆ ಮಾಡಿದ್ದಾರೆ.
ಚನ್ನಗಿರಿ : ತಾಲ್ಲೂಕಿನ ವಿವಿಧ ಗ್ರಾಮ ಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರು ರೋಡ್ ಶೋ ನಡೆಸಿ, ಭರ್ಜರಿ ಪ್ರಚಾರ ನಡೆಸಿದರು.
ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು, ಇವಿಎಂ ಭದ್ರತಾ ಕೊಠಡಿ ಮತ್ತು ಎಣಿಕೆ ಕೇಂದ್ರದ ಸಿದ್ದತೆಯನ್ನು ಏಪ್ರಿಲ್ 29 ರಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ಪರಿಶೀಲಿಸಿದರು.