ಇಂದು ಭದ್ರಾ ಜಲಾಶಯ ವೀಕ್ಷಣೆ, ಪ್ರತಿಭಟನೆ
ಭದ್ರಾ ಜಲಾಶಯದ ನೀರು ಸೋರಿಕೆ ಖಂಡಿಸಿ ಹಕ್ಕೊತ್ತಾಯ ಮಂಡಿಸಲು ನಾಳೆ ದಿನಾಂಕ 8ರ ಸೋಮವಾರ ಬೆಳಗ್ಗೆ 11ಕ್ಕೆ ಜಲಾಶಯಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರಕ್ಕಾಗಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕರೆ ನೀಡಿದರು.
ಭದ್ರಾ ಜಲಾಶಯದ ನೀರು ಸೋರಿಕೆ ಖಂಡಿಸಿ ಹಕ್ಕೊತ್ತಾಯ ಮಂಡಿಸಲು ನಾಳೆ ದಿನಾಂಕ 8ರ ಸೋಮವಾರ ಬೆಳಗ್ಗೆ 11ಕ್ಕೆ ಜಲಾಶಯಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರಕ್ಕಾಗಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕರೆ ನೀಡಿದರು.
ಶ್ರೀ ವಿನಾಯಕ ಎಜ್ಯುಕೇಶನ್ ಟ್ರಸ್ಟ್ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ, ಎನ್.ಎಸ್.ಎಸ್. ಯುವ ರೆಡ್ ಕ್ರಾಸ್ ಘಟಕದ ಸಮಾರೋಪ ಸಮಾರಂಭವನ್ನು ಬಾಪೂಜಿ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಯುವ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಸುನೀಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದ 24 ಜಿಲ್ಲೆಗಳಲ್ಲಿ ನಮ್ಮ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
ಕೇಂದ್ರ ಸರ್ಕಾರ ಕಳೆದ 3 ತಿಂಗಳ ಹಿಂದೆಯಷ್ಟೇ ಜಾರಿಗೆ ತಂದ ಭಾರತ್ ಅಕ್ಕಿ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ನಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಆನಗೋಡು ಬಳಿ ಬಸವಶ್ರೀ ಭಾರತ್ ಪೆಟ್ರೋಲ್ ಬಂಕ್ ಎದುರುಗಡೆ ಎನ್.ಹೆಚ್. 4 ರಸ್ತೆ ದಾಟುತ್ತಿದ್ದ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಅಪಘಾತದಲ್ಲಿ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳೆಹೊನ್ನೂರು : ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಜುಲೈ ಹಾಗೂ ಆಗಸ್ಟ್ ಮಾಹೆಯಲ್ಲಿನ ಕಾರ್ಯಕ್ರಮಗಳ ವಿವರ.
ಡಿ.ಟಿ. ಶ್ರೀನಿವಾಸ್ ಅಭಿಮಾನಿ ಬಳಗದ ವತಿಯಿಂದ ನಾಡಿದ್ದು ದಿನಾಂಕ 6ರ ಶನಿವಾರ ಮಧ್ಯಾಹ್ನ 1.30ಕ್ಕೆ ನಗರದ ಬಿಐಇಟಿ ಆವರಣದ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಭವನದಲ್ಲಿ ನೂತನ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಮಾಜಿ ಸೈನಿಕರು, ಮಾಜಿ ಸೈನಿಕರ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್.ಆಂಜನೇಯ ಅಭಿಮಾನಿಗಳು ಹಾಗೂ ಡಾ.ಹೆಚ್. ವಿಶ್ವನಾಥ್ ಅಭಿಮಾನಿಗಳಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವರೂ, ಚಿಂತಕರೂ ಆದ ಡಾ. ಹೆಚ್. ವಿಶ್ವನಾಥ್ ಅವರ ಹುಟ್ಟು ಹಬ್ಬ ಕಾರ್ಯಕ್ರಮವನ್ನು ಇಂದು ಸಂಜೆ 6.30ಕ್ಕೆ ಆರ್.ಹೆಚ್. ಧರ್ಮಶಾಲೆಯಲ್ಲಿ ಏರ್ಪಡಿಸಲಾಗಿದೆ.
ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಪದ್ಮಶಾಲಿ ಸಮಾಜದ ಹಿರಿಯರಾದ ಕ್ಯಾಪ್ಟನ್ ಪಿ.ಜೆ.ನಾಗರಾಜ್, ಡಿ.ಎಸ್.ಕೆ ಪರಶುರಾಮ ಅವರು ಶ್ರೀ ಮಾರ್ಕಂಡೇಶ್ವರ ಸ್ವಾಮಿಗೆ 101 ತೆಂಗಿನ ಕಾಯಿ ಒಡೆಯುವ ಹರಕೆಯನ್ನು ತೀರಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಪೂಜೆ ಇರುತ್ತದೆ.
ದಾವಣಗೆರೆಯ ಚಾಣಕ್ಯ ಪ್ರಥಮ ದರ್ಜೆ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಕಕ್ಕರಗೊಳ್ಳ ಗ್ರಾಮದ ಸಮುದಾಯ ಭವನದಲ್ಲಿ ಬೆಳಗ್ಗೆ 11ಕ್ಕೆ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ.