ನಗರಕ್ಕಿಂದು ಕರ್ನಾಟಕ ಜ್ಯೋತಿ ರಥಯಾತ್ರೆ
ಕರ್ನಾಟಕ ಸಂಭ್ರಮ – 50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥ ಯಾತ್ರೆಯು ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಇಂದು ಬೆಳಿಗ್ಗೆ 9ಕ್ಕೆ ಜಗಳೂರಿನಿಂದ ನಗರಕ್ಕೆ ಆಗಮಿಸಲಿದೆ.
ಕರ್ನಾಟಕ ಸಂಭ್ರಮ – 50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥ ಯಾತ್ರೆಯು ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಇಂದು ಬೆಳಿಗ್ಗೆ 9ಕ್ಕೆ ಜಗಳೂರಿನಿಂದ ನಗರಕ್ಕೆ ಆಗಮಿಸಲಿದೆ.
ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಆಷಾಢ ಮಾಸದ ಅಂಗವಾಗಿ ಶ್ರೀಮಠದ ಶಿಲಾಮಂದಿರ ಜೀರ್ಣೋದ್ಧಾರ, ಲೋಕ ಕಲ್ಯಾಣಾರ್ಥ, ಮಳೆ, ಬೆಳೆ ಸಿದ್ಧಿಗಾಗಿ ಶ್ರೀ ಕ್ಷೇತ್ರನಾಥ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ಸ್ವಾಮಿ ಸನ್ನಿಧಾನದಲ್ಲಿ ಇಂದಿನಿಂದ ಪೂಜಾನುಷ್ಟಾನ ಕೈಗೊಂಡಿದ್ದಾರೆ.
ರಾಣೇಬೆನ್ನೂರು : ತಾಲ್ಲೂಕಿನ ಐರಣಿ ಹೊಳೆಮಠದ ಶ್ರೀ ಸದ್ಗುರು ಮುಪ್ಪಿನಾರ್ಯ ಮಹಾತ್ಮಾಜಿಯವರ 40ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವು ಇದೇ ದಿನಾಂಕ 8ರ ಸೋಮವಾರ ನಡೆಯಲಿದೆ. ಅಂದು ಬೆಳಿಗ್ಗೆ ಸಾಮೂಹಿಕ ವಿವಾಹ ಮತ್ತು ಮಧ್ಯಾಹ್ನ 3 ಗಂಟೆಗೆ ರಥೋತ್ಸವ ಜರುಗಲಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಜಿಲ್ಲಾದ್ಯಂತ ಶುಕ್ರವಾರ ಮಣ್ಣೆತ್ತಿನ ಅಮಾವಾಸ್ಯೆ ಆಚರಿಸಲಾಯಿತು. ಹಳ್ಳಿಗಳಲ್ಲಿ ಮಾತ್ರ ಅಮವಾಸ್ಯೆ ಸಂಭ್ರಮ ಮನೆ ಮಾಡಿತ್ತು. ಉಳಿದಂತೆ ನಗರದ ಹಳೇ ಭಾಗದಲ್ಲಿ ಒಂದಿಷ್ಟು ಜನ ಈಗಲೂ ಆಚರಣೆ ರೂಢಿಸಿಕೊಂಡು ಬಂದಿದ್ದಾರೆ.
ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ರೈತರು ಯೂರಿಯಾ ರಸಗೊಬ್ಬರವನ್ನು ಬಳಕೆ ಮಾಡುವಾಗ ಸೂಕ್ತ ಎಚ್ಚರಿಕೆ ವಹಿಸುವಂತೆ ಕೃಷಿ ಇಲಾಖೆ ತಿಳಿಸಿದೆ. ಪ್ರತಿ ಎಕರೆಗೆ ಖುಷ್ಕಿ ಮುಸುಕಿನ ಜೋಳಕ್ಕೆ 25 ಕೆ.ಜಿ. ಯೂರಿಯಾ ಮಾತ್ರ ಬಳಸಬೇಕು.
ಮಲೇಬೆನ್ನೂರು : ಕಾಗಿನೆಲೆ ಕನಕ ಗುರುಪೀಠದ ಬೆಳ್ಳೂಡಿ ಶಾಖಾ ಮಠದಲ್ಲಿರುವ ಚಂದ್ರಗುಪ್ತ ಮೌರ್ಯ ಶಿಕ್ಷಣ ಸಂಸ್ಥೆಯ ಐಎಎಸ್ ಮತ್ತು ಕೆಎಎಸ್ ಕೋಚಿಂಗ್ ತರಬೇತಿಯನ್ನು ತುಮಕೂರಿನ ಟ್ಯಾಕಲ್ ಅಕಾಡೆಮಿಯ ಅಧ್ಯಕ್ಷ ಡಾ.ಹೆಚ್.ಎಸ್ ನಿರಂಜನಾರಾಧ್ಯ ಉದ್ಘಾಟಿಸಿದರು.
ಹೊನ್ನಾಳಿ : ಶಿವಮೊಗ್ಗದಿಂದ ಹೊನ್ನಾಳಿ ಮಾರ್ಗವಾಗಿ ದಾವಣಗೆರೆಗೆ ಹೋಗುತ್ತಿದ್ದ ಹರಿಹರ ಡಿಪೋಗೆ ಸಂಬಂಧಪಟ್ಟ ಕೆಎಸ್ಸಾರ್ಟಿಸಿ ಬಸ್ನ ಚಾಲಕ ನಿದ್ದೆ ಮಂಪರಿನಲ್ಲಿ ಹೊನ್ನಾಳಿಯ ಬಲ್ಭ್ ಫ್ಯಾಕ್ಟರಿಯ ಬಳಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮುಂದಿನ 2 ಚಕ್ರಗಳು ಸಿಡಿದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ 27 ಪ್ರಯಾಣಿಕರಲ್ಲಿ, ಚಾಲಕ ತೆಲಗಿ ಸಿದ್ದಪ್ಪ ಸೇರಿದಂತೆ 7 ಜನರಿಗೆ ಸಣ್ಣ – ಪುಟ್ಟ ಗಾಯಗಳಾಗಿವೆ.
ಹೊನ್ನಾಳಿ : ತಾಲ್ಲೂಕಿನ ಹರಳಹಳ್ಳಿ ಗ್ರಾಮದ ರೈತ ಡಿ.ಕೆ. ಕಡೂರಪ್ಪ (48) ಸಾಲ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯವು 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಹರಿಹರದ ಹರ್ಲಾಪುರದ ಕೆಎಸ್ಆರ್ಟಿಸಿ ಬಸ್ ಡಿಪೋ ಸಮೀಪದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದಲ್ಲಿ ಡಿಪ್ಲೋಮಾ ಕೋರ್ಸುಗಳ ಉಳಿಕೆ ಸೀಟುಗಳ ನೇರ ಪ್ರವೇಶಕ್ಕೆ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.