
ಪಠ್ಯ, ಪುಸ್ತಕ, ಸಮವಸ್ತ್ರ ವಿತರಣೆ
ಮಲೇಬೆನ್ನೂರು : ಧೂಳೆಹೊಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಅವರು ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಗಳನ್ನು ವಿತರಿಸಿದರು.
ಮಲೇಬೆನ್ನೂರು : ಧೂಳೆಹೊಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಅವರು ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಗಳನ್ನು ವಿತರಿಸಿದರು.
ಮಲೇಬೆನ್ನೂರು : ಹಾಲಿವಾಣ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 50 ಲೋಡ್ ಭತ್ತದ ಹುಲ್ಲಿನ ಬಣವೆ ಅಗ್ನಿಗೆ ಆಹುತಿ ಆಗಿದೆ.
ಹರಿಹರ : ದುಶ್ಚಟಗಳು ಯುವ ಸಮುದಾಯಕ್ಕೆ ದೊಡ್ಡ ಶತ್ರುವಾಗಿವೆ. ದೇಶದಲ್ಲಿ ಶೇ.60ರಷ್ಟು ಯುವಜನರು ಇರುವ ಕಾರಣ, ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ಜಿಲ್ಲೆಯ ಹಿರಿಯ ನಿರ್ದೇಶಕ ವಿ. ವಿಜಯಕುಮಾರ್ ನಾಗನಾಳ ಹೇಳಿದರು.
ಮಲೇಬೆನ್ನೂರು : ತಂಬಾಕು ಉತ್ಪನ್ನಗಳಿಗೆ ಜನರು ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿ ರುವುದು ವಿಷಾದನೀಯ ಎಂದು ಧರ್ಮಸ್ಥಳ ಯೋಜ ನೆಯ ಅಖಿಲ ಕರ್ನಾಟಕ ಜನ ಜಾಗೃತಿ ಸಮಿತಿ ಸದಸ್ಯ ಜಿ. ಮಂಜುನಾಥ್ ಪಟೇಲ್ ಕಳವಳ ವ್ಯಕ್ತಪಡಿಸಿದರು.
ಮಲೇಬೆನ್ನೂರು : ಇಲ್ಲಿನ ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ವೇಳೆ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತ ಕೋರಲಾಯಿತು. ಈ ವೇಳೆ ವಿದ್ಯಾರ್ಥಿಗಳಿಗೆ ಸರ್ಕಾರ ಕೊಡಮಾಡುವ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಹರಿಹರ : ಮಳೆ ಬಂದರೆ ಸಂಪೂರ್ಣ ಮುಳುಗಡೆಯಾಗುವ ಗಂಗಾನಗರದಲ್ಲಿರುವ ನಿವಾಸಿಗಳನ್ನು ನಗರಸಭೆ ಜಾಗಕ್ಕೆ ಸ್ಥಳಾಂತರಿಸುವಂತೆ ನಗರಸಭೆ ಸದಸ್ಯ ಎಸ್.ಎಂ. ವಸಂತ್ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಮಲೇಬೆನ್ನೂರು : ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ, ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕಾಗಿನೆಲೆ ಕನಕ ಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕರೆ ನೀಡಿದ್ದಾರೆ.
ಮಲೇಬೆನ್ನೂರು : ಇಲ್ಲಿನ ಭದ್ರಾ ನಾಲಾ ನಂ.3 ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಕಾಂತ್ ಅವರು ಬುಧವಾರ ಸೇವೆಯಿಂದ ವಯೋ ನಿವೃತ್ತರಾದರು.
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಛೇರಿ ಆವರಣದಲ್ಲಿ ಬುಧವಾರ ಆರೋಗ್ಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ಆರೋಗ್ಯ ಅಮೃತ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಮಲೇಬೆನ್ನೂರು : ಜಮ್ಮು ಕಾಶ್ಮೀರದಲ್ಲಿ ಕಳೆದ ವಾರ ನಡೆದ 45 ನೇ ರಾಷ್ಟ್ರಮಟ್ಟದ ಪಂಜ ಕುಸ್ತಿ ಸ್ಪರ್ಧೆಯಲ್ಲಿ ಕುಂಬಳೂರಿನ ಕಣ್ಣಾಳ್ ಕೆಂಚಪ್ಪ ಅವರು ಚಿನ್ನದ ಪದಕವನ್ನು ಪಡೆದಿದ್ದಾರೆ.
ಮಲೇಬೆನ್ನೂರು : ಸೋಮವಾರ ರಾತ್ರಿ ಬೀಸಿದ ಬಿರುಗಾಳಿ ಮಳೆಗೆ ಮಲೇಬೆನ್ನೂರು ಪಟ್ಟಣದ ಶ್ರೀ ಕಾಳಿಕಾ ದೇವಿ ಸಮುದಾಯ ಭವನದ ಮೇಲ್ಚಾವಣಿ ಮಗುಚಿ ಪಕ್ಕದ ಮನೆ ಮೇಲೆ ಬಿದ್ದಿದೆ. ಈ ಘಟನೆಯಿಂದ ಯಾರಿಗೂ ತೊಂದರೆ ಆಗಿಲ್ಲ ಎಂದು ಆನಂದಚಾರ್ ತಿಳಿಸಿದ್ದಾರೆ.
ಹರಿಹರ ತಾಲ್ಲೂಕಿನ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ 64 ಪ್ರೌಢ ಶಾಲೆಗಳು ಮತ್ತು ಪ್ರಾಥಮಿಕ 227 ಶಾಲೆಗಳು ಇವೆ. ಶಾಲೆಯ ಮಕ್ಕಳಿಗೆ ಉಚಿತ ಸಮವಸ್ತ್ರ ಸೇರಿದಂತೆ, ಸೌಲಭ್ಯಗಳ ವಿತರಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ತಿಳಿಸಿದರು.