
ಹಿರಿಯ ಸಾಹಿತಿ ಕಲೀಂ ಬಾಷಾ ಅವರಿಗೆ ನುಡಿನಮನ
ಹರಿಹರ : ಮೊನ್ನೆ ನಿಧನರಾದ ಬಂಡಾಯ ಸಾಹಿತಿ ಜೆ.ಕಲೀಂ ಬಾಷ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ತು ಮತ್ತು ಪರಸ್ಪರ ಬಳಗದಿಂದ ವತಿಯಿಂದ ನಗರದ ರಚನಾ ಕ್ರೀಡಾ ಟ್ರಸ್ಟ್ ಸಭಾಂಗಣ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು.
ಹರಿಹರ : ಮೊನ್ನೆ ನಿಧನರಾದ ಬಂಡಾಯ ಸಾಹಿತಿ ಜೆ.ಕಲೀಂ ಬಾಷ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ತು ಮತ್ತು ಪರಸ್ಪರ ಬಳಗದಿಂದ ವತಿಯಿಂದ ನಗರದ ರಚನಾ ಕ್ರೀಡಾ ಟ್ರಸ್ಟ್ ಸಭಾಂಗಣ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು.
ಹರಿಹರ : ನಗರದ ಐತಿಹಾಸಿಕ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ರಥೋತ್ಸವವು ಇದೇ ದಿನಾಂಕ 12 ರಂದು ನಡೆಯುವುದರ ನಿಮ್ಮಿತ್ತವಾಗಿ, ಶ್ರೀ ಹರಿಹರೇಶ್ವರ ಮತ್ತು ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಿದ್ಯುತ್ ದೀಪಗಳಿಂದ ಶೃಂಗಾರ ಮಾಡಲಾಗಿದ್ದು, ಭಕ್ತರನ್ನು ಆಕರ್ಷಿಸುತ್ತದೆ.
ಮಲೇಬೆನ್ನೂರು : ಇಲ್ಲಿನ ಹಿಂದೂ – ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾದ ಸೂಫಿ ಸಂತ ಹಜರತ್ ಸೈಯದ್ ಹಬೀಬುಲ್ಲಾ ಷಾ ಖಾದ್ರಿ ಅವರ ಉರುಸ್ ಅಂಗವಾಗಿ ಗಂಧದ (ಸಂದಲ್) ಮೆರವಣಿಗೆ ಬುಧವಾರ ಸಂಜೆ ಪಟ್ಟಣದಲ್ಲಿ ಸಂಭ್ರಮದಿಂದ ಜರುಗಿತು.
ಹಿಂದೂ-ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾದ ಸೂಫಿ ಸಂತ ಹಜರತ್ ಸೈಯದ್ ಹಬೀಬುಲ್ಲಾ ಷಾ ಖಾದ್ರಿ ಅವರ ಗಂಧ (ಸಂದಲ್) ಮತ್ತು ಉರುಸ್ ಇಂದು ಮತ್ತು ನಾಳೆ ಅಪಾರ ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ಹಾಗೂ ಶ್ರದ್ಧಾ-ಭಕ್ತಿಯಿಂದ ಜರುಗಲಿದೆ.
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ. ಚೇತನ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಮಲೇಬೆನ್ನೂರು : ಶ್ರೇಷ್ಠ ಶರಣ ಮಡಿವಾಳ ಮಾಚಿದೇವರು ವೀರ ಸೇನಾನಿಯಾಗಿ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ನಂದಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರೂ ಆದ ಪುರಸಭೆ ನಾಮಿನಿ ಸದಸ್ಯ ಬಿ. ವೀರಯ್ಯ ಹೇಳಿದರು.
ಹರಿಹರ : ನಗರದ ಅಂಜುಮಾನ್ ಇಸ್ಲಾಮಿಯಾ ಸಮಿತಿಗೆ ರಾಜ್ಯ ವಕ್ಫ್ ಮಂಡಳಿ ಹೈಟೆಕ್ ಆಂಬ್ಯುಲೆನ್ಸ್ ನೀಡಿದ್ದು, ಅತಿ ಶೀಘ್ರದಲ್ಲೇ ಅದನ್ನು ಲೋಕಾರ್ಪಣೆ ಮಾಡಲಾಗುತ್ತದೆ
ಮಲೇಬೆನ್ನೂರು ಸಮೀಪದ ನಿಟ್ಟೂರು ರಸ್ತೆ ಅಕ್ಕಪಕ್ಕದಲ್ಲಿರುವ ಭದ್ರಾ ಅಚ್ಚುಕಟ್ಟು ಪ್ರದೇಶದ ಗದ್ದೆಗಳಲ್ಲಿ ಒಂದೆಡೆ ಮಹಿಳೆಯರು ಭತ್ತದ ನಾಟಿ ಮಾಡುತ್ತಿದ್ದರೆ, ಇನ್ನೊಂದಡೆ ಭತ್ತದ ನಾಟಿ ಮಾಡಲು ಟ್ರಾಕ್ಟರ್ ಗಳು ರೊಳ್ಳಿ ಹೊಡೆಯುತ್ತಿರುವ ಕೆಸರಿನ ಹುಳಗಳನ್ನು ತಿನ್ನಲು ಬೆಳ್ಳಕ್ಕಿ ಹಿಂಡು ಲಗ್ಗೆ ಇಟ್ಟಿರುವ ದೃಶ್ಯ ಸೋಮವಾರ ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕಿತು.
ಮಲೇಬೆನ್ನೂರು : ದಾವಣಗೆರೆಯಿಂದ ದೇವರಬೆಳಕೆರೆ, ಕುಣಿಬೆಳಕೆರೆ, ನಂದಿತಾವರೆ ಮಾರ್ಗವಾಗಿ ಹರಿಹರಕ್ಕೆ ಮತ್ತು ಹರಿಹರದಿಂದ ನಂದಿತಾವರೆ, ದೇವರಬೆಳಕೆರೆ, ಕುಣಿಬೆಳಕೆರೆ ಮಾರ್ಗವಾಗಿ ದಾವಣಗೆರೆ ತಲುಪುವ ಕೆಎಸ್ಸಾರ್ಟಿಸಿಯ ಹೊಸ ಬಸ್ ಸಂಚಾರ ಭಾನುವಾರದಿಂದ ಆರಂಭವಾಗಿದ್ದು, ಕುಣಿಬೆಳಕೆರೆಯಲ್ಲಿ ಗ್ರಾಮಸ್ಥರು ಬಸ್ಗೆ ಪೂಜೆ ಸಲ್ಲಿಸಿ ಸ್ವಾಗತಿಸಿದರು.
ಹರಿಹರ : ಸಾಲಬಾಧೆ ತಾಳಲಾರದೆ ದೀಟೂರು ಗ್ರಾಮದ ರೈತನೊಬ್ಬನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ದೀಟೂರು ಗ್ರಾಮದಲ್ಲಿ ನಡೆದಿದೆ.
ಹರಿಹರ : ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದ ಮಹಿಳಾ ಪ್ರಯಾಣಿಕರು ಹೆಚ್ಚುವರಿ ಬಸ್ ಬಿಡುವಂತೆ ಆಗ್ರಹಿಸಿ, ಬಸ್ಸಿಗೆ ಅಡ್ಡಗಟ್ಟಿ ಭಾನುವಾರ ತಡರಾತ್ರಿ ಪ್ರತಿಭಟನೆ ನಡೆಸಿದರು.
ಮಲೇಬೆನ್ನೂರು : ಭಾನುವಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ವೆಂಕಟೇಶ್ ರೆಡ್ಡಿ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಎಂ.ಕೆ. ಪಾಟೀಲ್ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.