
ಹರಿಹರದಲ್ಲಿ ಅಹಿಂದ ಹಾಗೂ ಶೋಷಿತ ವರ್ಗಗಳ ಸಭೆ
ಹರಿಹರ : ನಗರದ ಹೈಸ್ಕೂಲ್ ಬಡಾವಣೆಯ ಡಾ. ಅಂಬೇಡ್ಕರ್ ಭವನದಲ್ಲಿ ನಡೆದ ಕಾಂತ ರಾಜ್ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಬಿಡುಗಡೆ ಹಾಗೂ ಅನು ಷ್ಠಾನಕ್ಕಾಗಿ ಆಗ್ರಹಿಸಿ ಅಹಿಂದ ಹಾಗೂ ಶೋಷಿತ ವರ್ಗಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಹರಿಹರ : ನಗರದ ಹೈಸ್ಕೂಲ್ ಬಡಾವಣೆಯ ಡಾ. ಅಂಬೇಡ್ಕರ್ ಭವನದಲ್ಲಿ ನಡೆದ ಕಾಂತ ರಾಜ್ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಬಿಡುಗಡೆ ಹಾಗೂ ಅನು ಷ್ಠಾನಕ್ಕಾಗಿ ಆಗ್ರಹಿಸಿ ಅಹಿಂದ ಹಾಗೂ ಶೋಷಿತ ವರ್ಗಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮಲೇಬೆನ್ನೂರು : ಬೆಂಗಳೂರಿನಲ್ಲಿ ಶನಿವಾರ ಜರುಗಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಳೆಸಿರಿಗೆರೆಯ ‘ಬಿ’ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪಿ. ಆರ್. ಶಶಿಕಲಾ (ಬೇಬಮ್ಮ) ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಹ್ಮೀ ಹೆಬ್ಬಾಳ್ಕರ್ ಅವರು `ಉತ್ತಮ ಅಂಗನವಾಡಿ ಕಾರ್ಯಕರ್ತೆ’ ಪ್ರಶಸ್ತಿ ಯನ್ನು ನೀಡಿ ಗೌರವಿಸಿದರು.
ಮಲೇಬೆನ್ನೂರು : ದೇವರಬೆಳಕೆರೆ ಪಿಕಪ್ ಡ್ಯಾಂನ ಗಾಂಜಿ ವೀರಪ್ಪ ನಾಲೆಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ತಮ್ಮ ಸ್ವಂತ ಹಣದಲ್ಲಿ ಇಟಾಚಿಯಿಂದ ಸ್ವಚ್ಛಗೊಳಿಸುವ ಮೂಲಕ ರೈತರಿಗೆ ನೆರವಾಗಿದ್ದಾರೆ.
ಮಲೇಬೆನ್ನೂರು : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇತ್ತೀಚೆಗೆ ಕೊಕ್ಕನೂರಿಗೆ ತೆರಳುವ ಮಾರ್ಗ ಮಧ್ಯೆ ಜಿ. ಬೇವಿನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ಸನ್ಮಾನವನ್ನು ಸ್ವೀಕರಿಸಿ, ಬಳಿಕ ಭದ್ರಾ ನಾಲೆಯನ್ನು ವೀಕ್ಷಣೆ ಮಾಡಿದರು.
ಮಲೇ ಬೆನ್ನೂರು ಸಮೀಪದ ಹಳ್ಳಿಹಾಳ್ ಗ್ರಾಮದ ಶ್ರೀ ಮುರುಡ ಬಸವೇಶ್ವರ ದೇವರ ರಥೋತ್ಸವವು ಇಂದು ಸಂಜೆ 5 ಗಂಟೆಗೆ ಓಕಳಿಯೊಂದಿಗೆ ಜಾತ್ರೆಗೆ ತೆರೆ ಬೀಳಲಿದೆ ಎಂದು ಗ್ರಾಮದ ಹೆಚ್. ವೀರನಗೌಡ ಮತ್ತು ಯು.ಎನ್. ಶಿವನಗೌಡ ತಿಳಿಸಿದ್ದಾರೆ.
ಹರಿಹರ : ಹೊಸ ರೈತ ಸದಸ್ಯರುಗಳಿಗೆ ಸಾಲ ಕೊಡುವ ಉದ್ದೇಶವನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹೊಂದಿದ್ದು, ಈ ನಿಟ್ಟಿನಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಕ್ರಮವಹಿಸಬೇಕು ಎಂದು ಬ್ಯಾಂಕಿನ ಉಪಾಧ್ಯಕ್ಷ ಡಿ. ಕುಮಾರ್ ಹೇಳಿದರು.
ಮಲೇಬೆನ್ನೂರು : ಲೋಕಸಭಾ ಸದಸ್ಯರಾದ ಬಳಿಕ ಮೊದಲ ಬಾರಿಗೆ ಕೊಕ್ಕನೂರು ಗ್ರಾಮಕ್ಕೆ ಆಗಮಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಗ್ರಾಮದ ಮಹಿಳೆಯರು ಆರತಿ ಬೆಳಗಿ ಬರಮಾಡಿಕೊಂಡರು.
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಬೆಳ್ಳಿ ರಥೋತ್ಸವ ಮತ್ತು ಪಾಲಿಕೋತ್ಸವ ಇಂದು ವಿಜೃಂಭಣೆ ಯಿಂದ ಜರುಗಿದವು.
ಹರಿಹರ : ದೇವರಬೆಳಕೆರೆ ಚಾನಲ್ ನೀರು ಸೋರಿಕೆಯಾಗುತ್ತಿರುವುದನ್ನು ತಡಗಟ್ಟ ಬೇಕು ಮತ್ತು ಚಾನಲ್ ದುರಸ್ತಿಗೊಳಿಸಿ ಕೊನೆ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ದಾವಣಗೆರೆ-ಹರಿಹರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಹರಿಹರ : ಆರ್ಥಿಕ ಸಂಪನ್ಮೂಲಗಳ ಇತಿ ಮಿತಿ ನೋಡಿಕೊಂಡು ನಗರದ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿಕ್ಕೆ ಸಿದ್ದವಾಗಿರುವೆ. ಜೊತೆಗೆ ಗ್ರಾಮ ದೇವತೆ ಊರಮ್ಮ ದೇವಿ ಜಾತ್ರಾ ಮಹೋತ್ಸವ ಸಮಯದಲ್ಲಿ, ಸಕಲ ಭಕ್ತರಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಬೆಳಿಗ್ಗೆ ಅಜ್ಜಯ್ಯನ ಗದ್ದಿಗೆ ಪೂಜೆ ನಂತರ ಭಕ್ತರು ಮತ್ತು ದೇವಸ್ಥಾನದ ಟ್ರಸ್ಟ್ ಕಮಿಟಿ ವತಿಯಿಂದ ಫಳಾರ ಹಾಕಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮಲೇಬೆನ್ನೂರು ಸಮೀಪದ ವಡೆಯರ ಬಸಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಶ್ರೀ ಬಸವೇಶ್ವರ ದೇವರ ರಥೋತ್ಸವವು ಜರುಗಲಿದೆ. ಸಂಜೆ 6-30 ಕ್ಕೆ ಗ್ರಾಮದಲ್ಲಿ 23 ವರ್ಷಗಳ ಬಳಿಕ ಜಿ ವಿ ಈಶ ವಿರಚಿತ `ಆಶಾ-ಲತಾ’ ಎಂಬ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಗ್ರಾಮಸ್ತರು ಹಮ್ಮಿಕೊಂಡಿದ್ದಾರೆ.